Connect with us

Politics

ವಿಧಾನಸಭೆಯಲ್ಲಿ ಸಾಮಾಜಿಕ ಬಹಿಷ್ಕಾರ ಮತ್ತು ದ್ವೇಷ ಭಾಷಣ ತಡೆ ವಿಧೇಯಕಗಳು ಅಂಗೀಕಾರ

Published

on

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಮತ್ತು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಡಿ.18ರಂದು ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆಯಲ್ಲಿ ಸರ್ವಾನುಮತದ ಮೂಲಕ ಅಂಗೀಕಾರ ಪಡೆಯಿತು

ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇಪ್ಪ ಅವರು ಅಸಂವಿಧಾನಿಕ ಆಚರಣೆಗಳಾದ ಜಾತಿ ಪಂಚಾಯಿತಿಗಳು ಹೇರುವ ಸಾಮಾಜಿಕ ಬಹಿಷ್ಕಾರ, ಕಿರುಕುಳ, ವಿವಿಧ ರೀತಿಯ ಶಿಕ್ಷೆಗಳನ್ನು ತಡೆಗಟ್ಟಿ ಸಾಮಾಜಿಕ ಬಹಿಷ್ಕಾರ ಪದ್ದತಿಯನ್ನು ಸಮಾಜದಿಂದ ನಿರ್ಮೂಲನೆ ಮಾಡುವುದಕ್ಕಾಗಿ ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025ನ್ನು ಸರ್ಕಾರ ಜಾರಿಗೆ ತರುತ್ತಿದೆ ಎಂದು ತಿಳಿಸಿದರು.

ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ-2025 ಈ ವಿಧೇಯಕವು ವ್ಯಕ್ತಿಗಳ, ಸಮೂಹ, ಸಂಸ್ಥೆಗಳ ವಿರುದ್ಧ ಸಮಾಜದಲ್ಲಿ ಅಸಾಮರಸ್ಯ ದ್ವೇಷವನ್ನುಂಟು ಮಾಡುವ ದ್ವೇಷ ಭಾಷಣದ ಪ್ರಸರಣೆ, ಪ್ರಕಟಣೆ ಅಥವಾ ಪ್ರಚಾರವನ್ನು ಹಾಗೂ ಅಪರಾಧಗಳನ್ನು ತಡೆಗಟ್ಟಲು ಮತ್ತು ಪ್ರತಿಬಂಧಿಸಲು, ಅಂತಹ ಅಪರಾಧಗಳಿಗೆ ದಂಡನೆಯನ್ನು ಉಪಬಂದಿಸಲು ಹಾಗೂ ಹಾನಿಗೊಳಗಾದ ಸಂತ್ರಸ್ತರಿಗೆ ತಕ್ಕಷ್ಟು ಪರಿಹಾರವನ್ನು ಒದಗಿಸಲು ಈ ಶಾಸನವನ್ನು ಅಧಿನಿಯಮಿಸುವುದು ಅವಶ್ಯಕವೆಂದು ಪರಿಗಣಿಸಿ ಈ ವಿಧೇಯಕವನ್ನು ತರಲಾಗಿದೆ ಎಂದು ತಿಳಿಸಿದರು. ದ್ವೇಷ ಭಾಷಣ ಪುನರಾವರ್ತನೆಗೆ ಗರಿಷ್ಠ ಶಿಕ್ಷೆ 10 ವರ್ಷದ ಬದಲಾಗಿ 7 ವರ್ಷ ಜೈಲು ಶಿಕ್ಷೆ ಎಂದು ತಿದ್ದುಪಡಿ ಮಾಡಲಾಗಿದೆ ಎಂದು ಗೃಹ ಸಚಿವರು ಸ್ಪಷ್ಟಪಡಿಸಿದರು.

ಪ್ರತಿಪಕ್ಷ ಸದಸ್ಯರು ವಿಧೇಯಕ ಪ್ರತಿಗಳನ್ನು ಹರಿದು ತೀವ್ರ ವಿರೋಧ ವ್ಯಕ್ತಪಡಿಸಿದ ಮದ್ಯೆಯೇ ಸರ್ವಾನುಮತಗಳಿಂದ ವಿಧೇಯಕ ಅಂಗೀಕಾರ ಪಡೆಯಿತು.
ವಿಧೇಯಕದ ಕುರಿತು ಚರ್ಚಿಸುವಾಗ, ಈಗಾಗಲೇ ಮುದ್ರಿತವಾಗಿರುವ ಪುಸ್ತಕ, ಗ್ರಂಥದಲ್ಲಿ ದ್ವೇಷದ ಮಾತುಗಳು ಇವೆ ಎಂದಾದರೆ ಏನು ಕ್ರಮ? ಎಂದು ಕೇಳಿದ ಬಿಜೆಪಿ ಶಾಸಕ ಸುನೀಲ್ ಕುಮಾರ್ ಪ್ರಶ್ನೆಗೆ, ಹಳೆ ಪುಸ್ತಕದಲ್ಲಿ ಇಂತಹ ಅಂಶ ಇದ್ದರೆ, ಅದು ಕೂಡಾ ಈ ಕಾನೂನಿನ ವ್ಯಾಪ್ತಿಯಲ್ಲಿ ಬರಲಿದೆ. ಅಂತವನ್ನು ಬ್ಯಾನ್ ಮಾಡುವ ಪ್ರಕ್ರಿಯೆಗೆ ಅವಕಾಶ ಇದೆ ಸಚಿವ ಪರಮೇಶ್ವರ್ ಸ್ಪಷ್ಟನೆ ನೀಡಿದರು.

Continue Reading
Advertisement

DEATH

ಮಾಜಿ ಶಾಸಕ, ಹಿರಿಯ ರಾಜಕಾರಣಿ, ಧಾರ್ಮಿಕ ಕ್ಷೇತ್ರದ ಮುಂದಾಳು ಬಸ್ರೂರು ಅಪ್ಪಣ್ಣ ಹೆಗ್ಡೆ ಇನ್ನಿಲ್ಲ..

Published

on

ಮಾಜಿ ಶಾಸಕ, ಹಿರಿಯ ರಾಜಕಾರಣಿ ಬಸ್ರೂರು ಅಪ್ಪಣ್ಣ ಹೆಗ್ಡೆ(91) ಇಂದು ನಿಧನರಾಗಿದ್ದಾರೆ. ಧಾರ್ಮಿಕ, ಸಹಕಾರ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ತಮ್ಮದೇ ಆದ ರೀತಿಯಲ್ಲಿ ವಿಶಿಷ್ಟ ಛಾಪು ಮೂಡಿಸಿದ್ದ ಹಿರಿಯ ರಾಜಕೀಯ ಮುತ್ಸದ್ದಿ ಬಸ್ರೂರು ಅಪ್ಪಣ್ಣ ಹೆಗ್ಡೆ (Basruru Appanna Hegde) ಅವರು ತಮ್ಮ 91ವಯಸ್ಸಿನಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಇಂದು ಕೊನೆಯುಸಿರೆಳೆದರು.


ಬೈಂದೂರು ಮಾಜಿ ಶಾಸಕ ಅಪ್ಪಣ್ಣ ಹೆಗ್ಡೆ
1983-1985 ಅವಧಿಯಲ್ಲಿ ಜನತಾ ಪಕ್ಷದಿಂದ ಉಡುಪಿ ಜಿಲ್ಲೆಯ ಬೈಂದೂರು ಕ್ಷೇತ್ರದ ಶಾಸಕರಾಗಿದ್ದ ಅಪ್ಪಣ್ಣ ಹೆಗ್ಡೆ ಅವರು ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಸಮಸ್ಯೆಗಳಿಗೆ ಧ್ವನಿಯಾಗಿದ್ದರು. ಧಾರ್ಮಿಕ ಹಾಗೂ ಸಾಮಾಜಿಕ ಮುಂದಾಳುವಾಗಿದ್ದ ಅಪ್ಪಣ್ಣ ಹೆಗ್ಡೆ ಅವರು ಪ್ರಾಮಾಣಿಕ ಸೇವೆಗೆ ಹೆಸರುವಾಸಿಯಾಗಿದ್ದರು.

ಸಾಮಾಜಿಕ ಕ್ಷೇತ್ರಗಳಲ್ಲಿ ಸೇವೆ ಹಾಗೂ ಉತ್ತಮ ರೀತಿಯಲ್ಲಿ ಶಾಸಕರಾಗಿ ಕಾರ್ಯನಿರ್ವಹಿಸಿ ಕ್ಷೇತ್ರದ ಅಭಿವೃದ್ಧಿಗೆ ಬಸ್ರೂರು ಅಪ್ಪಣ್ಣ ಹೆಗ್ಡೆ ಮಹತ್ವದ ಕೊಡುಗೆ ನೀಡಿದ್ದರು. ಸ್ಥಳೀಯ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರು ಹಾಗೂ ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿಯೂ ಅಪ್ಪಣ್ಣ ಹೆಗ್ಡೆಯವರು ಕಾರ್ಯ ನಿರ್ವಹಿಸಿದ್ದರು.
91ನೇ ವಯಸ್ಸಿಗೆ ಕೊನೆಯುಸಿರೆಳೆದ ಅಪ್ಪಣ್ಣ ಹೆಗ್ಡೆಯವರು 1960 ರಿಂದ 83ವರೆಗೆ ಗ್ರಾಮ ಪಂಚಾಯತ್ ಸದಸ್ಯ ಹಾಗೂ ಅಧ್ಯಕ್ಷರಾಗಿದ್ದರು. ಧಾರ್ಮಿಕ ಕ್ಷೇತ್ರದಲ್ಲಿಯೂ ಅವರ ಸೇವೆ ಗಣನೀಯವಾಗಿದೆ. ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Continue Reading

Bantawala

ನರೇಗಾ ಬಚಾವೋ ಸಂಗ್ರಾಮ..ಕೇಂದ್ರ ಸರ್ಕಾರದ ಜನವಿರೋಧಿ ಕ್ರಮ ಖಂಡಿಸಿ ಕನ್ಯಾನದಲ್ಲಿ ಬ್ರಹತ್ ಪ್ರತಿಭಟನೆ..

Published

on

ಕೇಂದ್ರ ಸರ್ಕಾರ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ (ನರೇಗಾ) ಹೆಸರು ಹಾಗೂ ಅದರ ಮೂಲ ಸ್ವರೂಪವನ್ನು ಬದಲಾಯಿಸಿರುವ ಕ್ರಮವನ್ನು ಖಂಡಿಸಿ, ಕನ್ಯಾನ ವಲಯ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ “ನರೇಗಾ ಬಚಾವೋ ಸಂಗ್ರಾಮ” ದಡಿ ಕನ್ಯಾನ ಗ್ರಾಮ ಪಂಚಾಯತ್ ಮುಂಭಾಗದಲ್ಲಿ ಇಂದು ಬ್ರಹತ್ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ಘಾಟಿಸಿ ವಲಯ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾದ ಅಬ್ದುಲ್ ಮಜೀದ್ ಕನ್ಯಾನ ಮಾತನಾಡಿದರು.
ಮುಖ್ಯ ಭಾಷಣ ಮಾಡಿದ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಶ್ರೀ ಎಂ.ಎಸ್. ಮಹಮ್ಮದ್, ನರೇಗಾ ಯೋಜನೆಯ ಮೂಲಕ ಗ್ರಾಮೀಣ ಜನರಿಗೆ ದೊರೆಯುತ್ತಿರುವ ಉದ್ಯೋಗ ಭದ್ರತೆ, ಜೀವನಾಧಾರ ಮತ್ತು ಸಾಮಾಜಿಕ ನ್ಯಾಯದ ಮಹತ್ವವನ್ನು ವಿವರಿಸಿ, ಯೋಜನೆಯ ಹೆಸರಿನ ಬದಲಾವಣೆ ಮಾತ್ರವಲ್ಲ, ಅದರ ಆತ್ಮವನ್ನೇ ಕುಗ್ಗಿಸುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿಯನ್ನು ತೀವ್ರವಾಗಿ ಖಂಡಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀ ಕೆ.ಪಿ. ಅಬ್ದುಲ್ ರಹಿಮಾನ್ ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ಶ್ರೀ ಗಣೇಶ್ ಭಟ್ ನೀರ್ಪಾಜೆ ಅವರು ಉದ್ಯೋಗ ಖಾತರಿ ಯೋಜನೆಯ ಸಾಧಕ–ಬಾಧಕಗಳ ಕುರಿತು ಮಾತನಾಡಿ, ನರೇಗಾ ಯೋಜನೆ ಗ್ರಾಮೀಣ ಬಡವರ ಪಾಲಿಗೆ ಆಶಾಕಿರಣವಾಗಿದ್ದು, ಅದನ್ನು ದುರ್ಬಲಗೊಳಿಸುವ ಯಾವುದೇ ಪ್ರಯತ್ನವನ್ನು ಸಹಿಸಬಾರದೆಂದು ಆಗ್ರಹಿಸಿದರು.

ಕಾರ್ಯಕ್ರಮದಲ್ಲಿ ಕನ್ಯಾನ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ರೇಖಾ ರಮೇಶ್, ಪಂಚಾಯತ್ ಸದಸ್ಯರು, ಬೂತ್ ಅಧ್ಯಕ್ಷರುಗಳು, ಕಾಂಗ್ರೆಸ್ ಪಕ್ಷದ ಪ್ರಮುಖ ನಾಯಕರು ಹಾಗೂ ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

ಪ್ರತಿಭಟನೆಯ ಅಂತ್ಯದಲ್ಲಿ, ನರೇಗಾ ಯೋಜನೆಗೆ ಬೆಂಬಲ ಸೂಚಿಸಿ ಹಾಗೂ ‘ವಿಕಸಿತ ಭಾರತ ಗ್ರಾಮೀಣ ಉದ್ಯೋಗ ಖಾತರಿ (ವಿ.ಬಿ. ಗ್ರಾಮ್ ಜಿ)’ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸಿ, ಗ್ರಾಮ ಪಂಚಾಯತ್ ಪಿಡಿಒ ಮೂಲಕ ಮೇಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಜೊತೆಗೆ ಈ ವಿಷಯವನ್ನು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ನಿರ್ಣಯ ಕೈಗೊಳ್ಳಲು ತೀರ್ಮಾನಿಸಲಾಯಿತು.

Continue Reading

Bantawala

ನರೇಗಾ ಮರುಸ್ಥಾಪನೆಗೆ ಒತ್ತಾಯ:-ಕೊಳ್ನಾಡು ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಬಹುಮತದ ತೀರ್ಮಾನ..

Published

on

ಕೊಳ್ನಾಡು ಗ್ರಾಮ ಪಂಚಾಯತ್ ನ ಸಾಮಾನ್ಯ ಸಭೆಯು ಅಧ್ಯಕ್ಷರಾದ ಅಶ್ರಫ್ ಕೆ. ಸಾಲೆತ್ತೂರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಉಪಾಧ್ಯಕ್ಷರಾದ ಕೆ.ಎ. ಅಸ್ಮ ಹಸೈನಾರ್ ತಾಳಿತ್ತನೂಜಿ ಉಪಸ್ಥಿತರಿದ್ದರು.

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯ ಹೆಸರನ್ನು ಬದಲಾಯಿಸಿ ‘ವಿಕಸಿತ ಭಾರತ ಉದ್ಯೋಗ ಖಾತರಿ ಅಜೀವಿಕ ಅಭಿಯಾನ’ ಎಂದು ಮರುನಾಮಕರಣ ಮಾಡಿರುವ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿ (ಪಿ.ಡಿ.ಓ) ಸಭೆಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರೂ, ಹಿರಿಯ ಸದಸ್ಯರೂ ಆಗಿರುವ ಶ್ರೀ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಮಾತನಾಡುತ್ತಾ..ನರೇಗಾ ಯೋಜನೆಯ ಮೂಲ ಸ್ವರೂಪವನ್ನು ಕೈಬಿಟ್ಟು ವಿ.ಬಿ.ರಾಮ್ ಜಿ ಯೋಜನೆ ಜಾರಿಗೆ ತರಲಾಗಿರುವುದನ್ನು ಉಗ್ರವಾಗಿ ಖಂಡಿಸಿದರು. ಮಹಾತ್ಮ ಗಾಂಧಿ ನರೇಗಾ ಯೋಜನೆಯನ್ನೇ ಮರುಸ್ಥಾಪಿಸಬೇಕೆಂದು ಒತ್ತಾಯಿಸಿದರು.

ಈ ವಿಷಯವಾಗಿ ಸಭೆಯಲ್ಲಿ ಚರ್ಚೆ ನಡೆದಿದ್ದು, ಹಾಜರಿದ್ದ 29 ಸದಸ್ಯರ ಪೈಕಿ 20 ಮಂದಿ ಸದಸ್ಯರು ಸುಭಾಶ್ಚಂದ್ರ ಶೆಟ್ಟಿಯವರ ಅಭಿಪ್ರಾಯಕ್ಕೆ ಸರ್ವಾನುಮತದಿಂದ ಒಪ್ಪಿಗೆ ಸೂಚಿಸಿದರು. ಎಂಟು ಮಂದಿ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಬಹುಮತದ ಆಧಾರದ ಮೇಲೆ, ಸದ್ರಿ ನರೇಗಾ ಯೋಜನೆ ಹಾಗೂ ಅದರ ಮೂಲ ಹೆಸರು ಮತ್ತು ಸ್ವರೂಪವನ್ನು ಹಿಂದಿನಂತೆಯೇ ಮುಂದುವರಿಸುವಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಪತ್ರ ಬರೆಯುವಂತೆ ಸಾಮಾನ್ಯ ಸಭೆಯಲ್ಲಿ ಬಹುಮತದ ಮೂಲಕ ನಿರ್ಣಯ ಕೈಗೊಳ್ಳಲಾಯಿತು.

ಸಾಮಾನ್ಯ ಸಭೆಯಲ್ಲಿ ಹಿರಿಯ ಸದಸ್ಯರಾದ ಜಯಂತಿ ಎಸ್. ಪೂಜಾರಿ, ಅಬ್ದುಲ್ ಹಮೀದ್ ಸುರಿಬೈಲ್, ಶ್ರೀಮತಿ ನೆಬಿಸಾ, ಶ್ರೀಮತಿ ರತ್ನಾ, ಸಂಜೀವಿ, ಶ್ರೀಮತಿ ಭಾಗೀರಥಿ, ಶ್ರೀ ಪದ್ಮನಾಭ ಕುಳಾಲು, ಅಬ್ದುಲ್ ರಜಾಕ್, ಶ್ರೀಮತಿ ಸುಲೋಚನಾ ರೈ, ಶ್ರೀಮತಿ ಸವಿತಾ ಬರ್ಕಳ, ನತಾಲಿಯಾ ಕುಟಿನ್ಹಾ, ಶ್ರೀಮತಿ ದೇವಕಿ, ಲವೀನಾ ಫೆರಾವೋ, ಜಯಂತಿ ಜನಾರ್ದನ ಗೌಡ, ಅಬ್ದುಲ್ ರಜಾಕ್ ಸೆರ್ಕಳ, ಪ್ರಶಾಂತ್ ಶೆಟ್ಟಿ ಅಗರಿ, ಲೋಹಿತ್, ಅನಿತಾ ಶೆಟ್ಟಿಗಾರ್, ಸೌಮ್ಯಲತಾ ಕಾಡುಮಠ, ಶ್ರೀ ರಾಜರಾಂ ಹೆಗ್ಡೆ ಕುದ್ರಿಯ, ಶಶಿಕಲಾ, ಹರೀಶ್ ಟೈಲರ್, ಮಹಮ್ಮದ್ ಮಂಚಿ, ಕೃಷ್ಣಪ್ಪ ಪೂಜಾರಿ ಹಾಗೂ ಎ.ಬಿ. ಅಬ್ದುಲ್ಲಾ ಭಾಗವಹಿಸಿದ್ದರು. ದ್ವಿತೀಯ ಲೆಕ್ಕ ಪರಿಶೋಧಕ ದಿನೇಶ್ ಹಾಗೂ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಸಭೆಯನ್ನು ಸ್ವಾಗತಿಸಿ ಧನ್ಯವಾದ ತಿಳಿಸಿದರು.

Continue Reading

Trending

Copyright © 2025 Deevatige