Dakshina Kannada
ಧಾರ್ಮಿಕ ಸಂಪ್ರದಾಯದ ಮೇಲೆ ಸವಾರಿ ಮಾಡಿದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ- ಸತೀಶ್ ಕುಂಪಲ
- Share
- Tweet /home/u338848369/domains/deevatigenews.com/public_html/wp-content/plugins/mvp-social-buttons/mvp-social-buttons.php on line 72
https://deevatigenews.com/wp-content/uploads/2025/12/WhatsApp-Image-2025-12-21-at-1.32.20-PM-1000x600.jpeg&description=ಧಾರ್ಮಿಕ ಸಂಪ್ರದಾಯದ ಮೇಲೆ ಸವಾರಿ ಮಾಡಿದರೆ ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ- ಸತೀಶ್ ಕುಂಪಲ', 'pinterestShare', 'width=750,height=350'); return false;" title="Pin This Post">
ಕೇಪು : ಜಿಲ್ಲೆಯಲ್ಲಿ ಯಾವ ರೀತಿಯಲ್ಲಿ ಕಾನೂನು ಸುವ್ಯವಸ್ಥೆಗೆ ಸಹಕಾರ ಕೊಡಬೇಕೋ ಅದನ್ನು ಭಾರತೀಯ ಜನತಾ ಪಾರ್ಟಿ ಪೂರ್ತಿಯಾಗಿ ನೀಡಿದೆ. ಆದರೆ, ಹಿಂದೂ ಧರ್ಮದ ಆಧಾರದ ಮೇಲೆ ನಡೆಯುವ ಈ ಧಾರ್ಮಿಕ ಸಂಪ್ರದಾಯದ ಮೇಲೆ ಸವಾರಿ ಮಾಡಿದರೆ ಮುಂದಿನ ದಿನಗಳಲ್ಲಿ ನೀವು ಅನುಭವಿಸುತ್ತೀರಿ. ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸತೀಶ್ ಕುಂಪಲ ಹೇಳಿದರು

ಅವರು ಬಂಟ್ವಾಳ ತಾಲೂಕು ಕೇಪು ಗ್ರಾಮದ ಶ್ರೀ ಉಳ್ಳಾಲ್ತಿ ಅಮ್ಮನವರ ಕಾರಣಿಕ ಕ್ಷೇತ್ರಕ್ಕೆ ಆಗಮಿಸಿ ನಮ್ಮ ಹಿರಿಯರಿಂದಲೇ ಬಂದಿರುವ ಸಾಂಪ್ರದಾಯಿಕ ಆಚರಣೆಗಳಿಗೆ ತಡೆಯಾಗುತ್ತಿರುವ ಬಗ್ಗೆ ಮಾತನಾಡುತ್ತಾ, ಹಿಂದೂ ಸಂಪ್ರದಾಯಗಳ ಮೇಲೆ ಸರಕಾರ ಸವಾರಿ ಮಾಡಬೇಡಿ, ದಬ್ಬಾಳಿಕೆ ಮಾಡಬೇಡಿ, ಸಂಪ್ರದಾಯವನ್ನು ನಡೆಸಲು ಮುಕ್ತ ಅವಕಾಶವನ್ನು ನೀಡಿ, ನೀವು ಸಂಪ್ರದಾಯಿಕವಾಗಿ ನಡೆಯುವ ಕೋಳಿ ಅಂಕವನ್ನು ಜೂಜು ಎಂದು ಏಕೆ ಕರೆಯುತ್ತೀರಿ ? ಜೂಜು ಮಾಡುವವರ ಮೇಲೆ ಕ್ರಮ ತೆಗೆದುಕೊಳ್ಳುವಲ್ಲಿ ನಮ್ಮ ಅಭ್ಯಂತರವಿಲ್ಲ. ಆದರೆ ಸಂಪ್ರದಾಯದ ಮೇಲೆ ಕ್ರಮ ಏಕೆ ? ನಾಳೆ ದೇವಸ್ಥಾನದಲ್ಲಿ ಪೂಜೆ ಮಾಡಬೇಡಿ, ದೈವಸ್ಥಾನದಲ್ಲಿ ಸೇವೆ ನಿಲ್ಲಿಸಿ ಹೇಳುತ್ತೀರಿ ನಿಮ್ಮ ಸರಕಾರ ಬಂದ ತಕ್ಷಣ ಸರಕಾರ ಹೇಳಿದ ಹಾಗೆ, ಮಂತ್ರಿಗಳು ಹೇಳಿದ ಹಾಗೆ ಶಾಸಕರು ಹೇಳಿದ ಹಾಗೆ ಜನ ಕೇಳ ಬೇಕಾ ? ಪಾಪದವರ ಮೇಲೆ ಕೇಸು ಹಾಕಿ ಏನು ಸಾಧಿಸುತ್ತೀರಿ ? ಪೊಲೀಸರು ಮಾಡುತ್ತಾರೆಂದರೆ ಆಡಳಿತ ಕಣ್ಣುಮುಚ್ಚಿ ಕುಳಿತುಕೊಂಡಿದೆಯಾ ? ಕೋಳಿಅಂಕಕ್ಕೆ ಬಂದು ಶಾಸಕರು ಹೋರಾಟ ಮಾಡಬೇಕಾ ? ಕಾಂಗ್ರೇಸ್ ಸರಕಾರವಿದ್ದು, ಕಾಂಗ್ರೇಸ್ ಶಾಸಕರು ಇಲ್ಲಿಗೆ ಬಂದು ಕೋಳಿಅಂಕ ಮಾಡ್ಲಿಕ್ಕೆ ನಾನು ನಿಮ್ಮೊಂದಿಗಿದ್ದೇನೆ ಎಂದರೆ ಏನು ? ಉಸ್ತುವಾರಿ ಸಚಿವರ ಮೂಲಕ ಸರಪಡಿಸಲಿಕ್ಕೆ ಆಗಲಿಲ್ಲವಾ ? ಈ ರೀತಿ ಅತ್ಯಂತ ಕೆಟ್ಟ ಸಂಪ್ರದಾಯವನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪೊಲೀಸರ ಮೂಲಕ ಕಾಂಗ್ರೇಸ್ ಸರಕಾರ ಮಾಡಿಸುತ್ತಿದೆ. ಪ್ರಜಾತಂತ್ರ ವ್ಯವಸ್ಥೇಯಲ್ಲಿ ಸಂವಿದಾನ ಅಂತ ಹೇಳುತ್ತಾ ಸಂವಿದಾನದ ಎಲ್ಲಾ ವ್ಯವಸ್ಥೆಗಳನ್ನು ಮುಟ್ಟುಗೋಲು ಹಾಕುವ ರೀತಿಯಲ್ಲಿ ವರ್ತಿಸುತ್ತಿರುವ ಕಾಂಗ್ರೇಸ್ ಸರಕಾರದ ನಿಲುವನ್ನು ಈ ಸಂದರ್ಭದಲ್ಲಿ ಅತ್ಯುಗ್ರವಾಗಿ ಖಂಡಿಸುತ್ತೇನೆ ಎಂದರು.

ಇವತ್ತು ಮಲರಾಯ ದೈವದ ಸಮ್ಮುಖದಲ್ಲಿ ಕೋಳಿ ಹರಿಕೆ ಸೇವೆ ನಡೆಯಲಿದ್ದು, ಅವರಿಗೆ ಧಾರ್ಮಿಕ ಸೇವೆ ನಡೆಸಲು ಪೊಲೀಸ್ ಇಲಾಖೆ ಮತ್ತು ಸರಕಾರ ಮುಕ್ತವಾಗಿ ಸಹಕಾರವನ್ನು ನೀಡಬೇಕು ಎಂದು ವಿನಂತಿಸುವುದಕ್ಕಾಗಿ ನಾವು ಜನರ ಪರವಾಗಿ ಜವಾಬ್ಧಾರಿಯಿಂದ ಇಲ್ಲಿಗೆ ಬಂದಿದ್ದೇವೆ ಎಂದರು. ಈ ಜಿಲ್ಲೆಯಲ್ಲಿ ನಡೆಯುವಂತಹ ಸಂಪ್ರದಾಯಿಕ ಆಚರಣೆಗಳಿಗೆ ಆಡಳಿತ ವ್ಯವಸ್ಥೆ ವಿರುದ್ಧವಾಗಿ ಹೋದರೆ ಬಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರೊಂದಿಗೆ ನಾವು ಯಾವತ್ತೂ ನಿಲ್ಲುತ್ತೇವೆ. ಜನರ ಮದ್ಯೆ ನಿಂತು ಸಹಕಾರ ಮಾಡುತ್ತೇವೆ ಎಂದರು. ಕಾನೂನನ್ನು ಗೌರವಿಸಿಕೊಂಡು ಸಂಪ್ರದಾಯ ಪ್ರಕಾರ ಏನು ಮಾಡಬೇಕೋ ಅದನ್ನು ಮಾಡಿ ನಾನೂ ನಿಮ್ಮೊಂದಿಗೆ ಇರುತ್ತೇನೆ ಎಂದು ಭರವಸೆಯನ್ನು ನೀಡಿದರು.
ಜಿಲ್ಲಾಧ್ಯಕ್ಷರ ಜೊತೆಗೆ ಮಾಜಿ ಶಾಸಕರಾದ ಸಂಜೀವ ಮಠಂದೂರು,ಪುತ್ತೂರು ಗ್ರಾಮಾಂತರ ಮಂಡಲ ಅಧ್ಯಕ್ಷರಾದ ದಯಾನಂದ ಉಜಿರೆಮಾರು, ವಿಟ್ಲ ಪಟ್ಟಣ ಪಂಚಾಯತ್ ಅದ್ಯಕ್ಷರಾದ ಕರುಣಾಕರ ನಾಯ್ತೊಟ್ಟು, ಸ್ಥಾಯಿ ಸಮಿತಿ ಅಧ್ಯಕ್ಷರಾದ ಆಶೋಕ್ ಕುಮಾರ್ ಶೆಟ್ಟಿ ಹಾಗೂ ಹಲವಾರು ಕಾರ್ಯಕರ್ತರು ಉಪಸ್ಥಿತರಿದ್ದರು.

ಕಳೆದ ಹಲವಾರು ವರ್ಷಗಳಿಂದ ಕೋಮು ಸಂಘರ್ಷಗಳಿoದ ತತ್ತರಿಸುತ್ತಿದ್ದ ಕರಾವಳಿಯನ್ನು ಹತೋಟಿಗೆ ತರಲು ಪ್ರತಿಯೊಬ್ಬರಿಗೂ ಸಾಮರಸ್ಯದ ಜೀವನ ಮತ್ತು ನ್ಯಾಯ ಸಮ್ಮತವಾದ ಬದುಕು ನೀಡಲು ಆಡಳಿತ ವ್ಯವಸ್ಥೆ ದಕ್ಷ ಪೊಲೀಸ್ ಅಧಿಕಾರಿಗಳನ್ನು ನೇಮಿಸಿದ ಬಳಿಕ ಬಹುತೇಕ ಅಕ್ರಮ ಚಟುವಟಿಕೆಗಳು ಸೇರಿದಂತೆ ಎಲ್ಲಾ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಿತ್ತು. ಅದರಂತೆ ಜೂಜು, ಕೋಳಿಅಂಕ ಸೇರಿದಂತೆ ತಡರಾತ್ರಿಗಳಲ್ಲಿ ನಡೆಯುವ ಮೋಜಿನ ಕಾರ್ಯಕ್ರಮಗಳಿಗೂ ಬ್ರೇಕ್ ನೀಡಲಾಗಿತ್ತು. ಆದರೆ ಕೇಪು ಉಳ್ಳಾಲ್ತಿ ಕ್ಷೇತ್ರದಲ್ಲಿ ಧಾರ್ಮಿಕ ನಂಟು ಹೊಂದಿರುವ ಜೂಜುರಹಿತವಾಗಿ ನಡೆಯುವ ಕೋಳಿ ಅಂಕಕ್ಕೆ ಕೋಳಿ ಅಂಕ ಪ್ರಿಯರು, ದೈವಾಭಿಮಾನಿಗಳು ಕೊನೆಯ ಘಳಿಗೆವರೆಗೂ ಪರವಾನಿಗೆಯ ನಿರೀಕ್ಷೆಯಲ್ಲಿದ್ದರು. ಆದರೆ ಕೋಳಿ ಅಂಕಕ್ಕೆ ಪರ್ಮಿಷನ್ ಸಿಗಲಿಲ್ಲ ಎಂದರೆ ನಾವು ಜೂಜುರಹಿತವಾಗಿ ಕೋಳಿಅಂಕವನ್ನು ಸಾಂಪ್ರದಾಯಿಕವಾಗಿ ಮಾಡಲೇಬೇಕು ಎಂಬುವುದು ಭಕ್ತರ ನಿಲುವು ಆಗಿತ್ತು. ಇದೀಗ ಸಂಪ್ರದಾಯ ಮತ್ತು ಕಾನೂನು ವ್ಯವಸ್ಥೆಗಳ ಮದ್ಯೆ ರಾಜಕೀಯ ನುಸುಳಿದೆ. ಮುಂದೆ ಏನಾಗುವುದೋ ಕಾದುನೋಡಬೇಕು.
arrest
ಮಂಗಳೂರು: ಮಾದಕ ವಸ್ತು ಮಾರಾಟ ದಂಧೆಕೋರರ ಜಾಲಕ್ಕೆ ಪೊಲೀಸ್ ಲಗಾಮು; ಮೂವರ ಬಂಧನ!
ಮಂಗಳೂರು: ನಗರದಲ್ಲಿ ನಿಷೇಧಿತ ಮಾದಕ ವಸ್ತುಗಳನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಜಾಲದ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ತೀವ್ರ ನಿಗಾ ಇರಿಸಿದ್ದು, ಪ್ರತ್ಯೇಕ ದಾಳಿಗಳ ಮೂಲಕ ಮೂವರು ಆರೋಪಿಗಳನ್ನು ಹೆಡೆಮುರಿಕಟ್ಟಿದ್ದಾರೆ.
ಪ್ರಕರಣ 1: ಗೂಡ್ ಶೆಡ್ಡೆ ಬಳಿ ಎಂಡಿಎಂಎ ಮಾರಾಟ ಯತ್ನ – ಇಬ್ಬರ ಬಂಧನ
ದಿನಾಂಕ 08-06-2026 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣಾ ವ್ಯಾಪ್ತಿಯ ಗೂಡ್ ಶೆಡ್ಡೆ ಪರಿಸರದಲ್ಲಿ ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ (MDMA) ಯನ್ನು ಸಾರ್ವಜನಿಕರಿಗೆ ಮಾರಾಟ ಮಾಡಲು ಯತ್ನಿಸುತ್ತಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ತಕ್ಷಣ ಕಾರ್ಯಪ್ರವೃತ್ತರಾದ ದಕ್ಷಿಣ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಜಂಟಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ದಸ್ತಗಿರಿ ಮಾಡಿದ್ದಾರೆ.
ಬಂಧಿತ ಆರೋಪಿಗಳು: 1. ಜನನ್ ಜಗನ್ನಾಥ್ (29 ವರ್ಷ), ತಂದೆ: ಜಗನ್ನಾಥ್, ವಾಸ: ಸಿಲ್ವರ್ ಗೇಟ್, ಕುಲಶೇಖರ, ಮಂಗಳೂರು. 2. ಪರೀಕ್ಷಿತ್ (33 ವರ್ಷ), ತಂದೆ: ಲೇ. ಜಯರಾಮ ಶೆಟ್ಟಿ, ವಾಸ: ಬೋಳಾರ, ಮಂಗಳೂರು.
ಸ್ವಾಧೀನಪಡಿಸಿಕೊಂಡ ಸೊತ್ತುಗಳು: ದಾಳಿಯ ವೇಳೆ ಪೊಲೀಸರು ಒಟ್ಟು 11.68 ಗ್ರಾಂ ಎಂಡಿಎಂಎ ಮಾದಕ ವಸ್ತು, ₹1,110 ನಗದು ಹಣ, 3 ಮೊಬೈಲ್ ಫೋನ್ಗಳು ಹಾಗೂ ಮಾದಕ ವಸ್ತು ತೂಕ ಮಾಡಲು ಬಳಸುತ್ತಿದ್ದ 1 ತೂಕ ಮಾಪನವನ್ನು ಜಪ್ತಿ ಮಾಡಿದ್ದಾರೆ. ಈ ಸಂಬಂಧ ಎನ್.ಡಿ.ಪಿ.ಎಸ್ ಕಾಯ್ದೆಯಡಿ (ಪ್ರಕರಣ ಸಂಖ್ಯೆ 122/2026) ಮೊಕದ್ದಮೆ ದಾಖಲಾಗಿದೆ.
ಪ್ರಕರಣ 2: ಡ್ರಗ್ಸ್ ಜಾಲದ ಮತ್ತೊಬ್ಬ ಆರೋಪಿ ಸುಶಾನ್ ಪೂಜಾರಿ ವಶಕ್ಕೆ
ದಿನಾಂಕ 06-06-2026 ರಂದು ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಮತ್ತೊಂದು ಎನ್.ಡಿ.ಪಿ.ಎಸ್ ಪ್ರಕರಣಕ್ಕೆ (ಕ್ರೈಂ ಸಂಖ್ಯೆ 116/2026) ಸಂಬಂಧಿಸಿದಂತೆ ತನಿಖೆ ಮುಂದುವರಿಸಿದ ಪೊಲೀಸರು, ತಲೆಮರೆಸಿಕೊಂಡಿದ್ದ ಮತ್ತೊಬ್ಬ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತ ಆರೋಪಿ: ಸುಶಾನ್ ಪೂಜಾರಿ (27 ವರ್ಷ), ತಂದೆ: ಲೋಹಿತಾಶ್ವ, ವಾಸ: ನಳಂದ ಶಾಲೆ ಹತ್ತಿರ, ಕಾರ್ ಸ್ಟ್ರೀಟ್, ಮಂಗಳೂರು.
ಹಿನ್ನೆಲೆ: ಈ ಪ್ರಕರಣದಲ್ಲಿ ಈಗಾಗಲೇ ಪ್ರಣಮ್ ಕೋಟ್ಯಾನ್ ಎಂಬಾತನನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಇದೀಗ ಪ್ರಕರಣದಲ್ಲಿ ಭಾಗಿಯಾಗಿದ್ದ ಸುಶಾನ್ ಪೂಜಾರಿಯನ್ನು ದಿನಾಂಕ 09-06-2026 ರಂದು ಪೊಲೀಸರು ಪತ್ತೆ ಹಚ್ಚಿ ದಸ್ತಗಿರಿ ಮಾಡಿದ್ದಾರೆ.
ಮುಂದಿನ ಪೊಲೀಸ್ ಕ್ರಮ:
ಬಂಧಿತ ಎಲ್ಲಾ ಆರೋಪಿಗಳನ್ನು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುತ್ತಿದ್ದು, ಮಾದಕ ವಸ್ತು ಜಾಲದ ಮೂಲ ಹಾಗೂ ಇದರ ಹಿಂದೆ ಇರುವ ಇತರ ಕಿಂಗ್ಪಿನ್ಗಳ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸಲು ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸ್ ಪ್ರಕಟಣೆ ತಿಳಿಸಿದೆ.



crime
ಕೋಟಿಗಟ್ಟಲೆ ಹನಿಟ್ರ್ಯಾಪ್ ಆರೋಪ: ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಉಚ್ಚಾಟನೆ
ಮಂಗಳೂರು: ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿಸಿ ಕೋಟಿಗಟ್ಟಲೆ ಹಣ ಸುಲಿಗೆ ಮಾಡಿರುವ ಗಂಭೀರ ಆರೋಪ ಎದುರಿಸುತ್ತಿರುವ ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ನಿಝಾಮ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ಹಾಗೂ ಹುದ್ದೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟಿಸಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಅವರು ಈ ಕುರಿತು ಅಧಿಕೃತ ಉಚ್ಚಾಟನಾ ಆದೇಶ ಹೊರಡಿಸಿದ್ದಾರೆ.

ಉಚ್ಚಾಟನೆಗೆ ಕಾರಣಗಳೇನು?
ಸಮಾಜ ವಿರೋಧಿ ಚಟುವಟಿಕೆ: ನಿಝಾಮ್ ವಿರುದ್ಧ ಕೇಳಿಬಂದಿರುವ ಸಮಾಜ ವಿರೋಧಿ ಚಟುವಟಿಕೆಯ ಆರೋಪಗಳು ಪಕ್ಷದ ಗಮನಕ್ಕೆ ಬಂದಿವೆ.
ಪಕ್ಷದ ಗೌರವಕ್ಕೆ ಧಕ್ಕೆ: ಈ ಆರೋಪಗಳು ಪಕ್ಷದ ಶಿಸ್ತು ಮತ್ತು ಗೌರವಕ್ಕೆ ತೀವ್ರ ಧಕ್ಕೆ ಉಂಟುಮಾಡಿವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
ಶಿಸ್ತು ಕ್ರಮ: ಪಕ್ಷದ ಹಿತಾಸಕ್ತಿ ಹಾಗೂ ಶಿಸ್ತನ್ನು ಕಾಪಾಡುವ ದೃಷ್ಟಿಯಿಂದ ಅವರನ್ನು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮತ್ತು ಯುವ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವದಿಂದ ತಕ್ಷಣದಿಂದಲೇ ಉಚ್ಚಾಟನೆ ಮಾಡಲಾಗಿದೆ.
ಪಕ್ಷದ ಕಡಕ್ ಸಂದೇಶ: > “ಪಕ್ಷದ ಸಿದ್ಧಾಂತ, ಮೌಲ್ಯಗಳು ಮತ್ತು ಸಂಘಟನೆಯ ಹಿತಾಸಕ್ತಿಗೆ ವಿರುದ್ಧವಾಗಿ ಯಾವುದೇ ಚಟುವಟಿಕೆಗಳನ್ನು ಸಹಿಸಲಾಗುವುದಿಲ್ಲ. ಪಕ್ಷದ ಶಿಸ್ತು ಉಲ್ಲಂಘಿಸುವವರ ವಿರುದ್ಧ ಮುಂದೆಯೂ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಸ್ಪಷ್ಟಪಡಿಸಿದೆ.
ಪ್ರಕರಣದ ಹಿನ್ನೆಲೆ:
ಮಂಗಳೂರಿನ ಉದ್ಯಮಿಯೊಬ್ಬರಿಗೆ ಯುವತಿಯನ್ನು ಪರಿಚಯಿಸಿ, ಬಳಿಕ ಖಾಸಗಿ ದೃಶ್ಯಗಳನ್ನು ಮುಂದಿಟ್ಟುಕೊಂಡು ಬರೋಬ್ಬರಿ 2.77 ಕೋಟಿ ರೂ. ಹಣವನ್ನು ಸುಲಿಗೆ ಮಾಡಲಾದ ಗಂಭೀರ ಪ್ರಕರಣ ದಾಖಲಾಗಿದೆ. ಈ ಹನಿಟ್ರ್ಯಾಪ್ ಜಾಲದಲ್ಲಿ ನಿಝಾಮ್ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಎಂಬ ಆರೋಪ ಕೇಳಿಬಂದ ಬೆನ್ನಲ್ಲೇ ಕಾಂಗ್ರೆಸ್ ವಲಯದಲ್ಲಿ ತೀವ್ರ ಮುಖಭಂಗ ಉಂಟಾಗಿತ್ತು. ಮುಜುಗರದಿಂದ ಪಾರಾಗಲು ಜಿಲ್ಲಾ ಯುವ ಕಾಂಗ್ರೆಸ್ ಘಟಕವು ಆರೋಪಿ ವಿರುದ್ಧ ಈ ಕಠಿಣ ಕ್ರಮ ಜರುಗಿಸಿದೆ.



Dakshina Kannada
ಮಾನವೀಯತೆಯ ಸಾಕಾರ: ಕುಂಬ್ರದ ಖ್ಯಾತ ವೈದ್ಯ ಡಾ. ವಿಘ್ನೇಶ್ವರ ಭಟ್ ಚಿಕಿತ್ಸೆಗೆ ಹರಿದುಬಂದ ನೆರವು; ಇನ್ನೂ ಬೇಕಿದೆ ಸಹೃದಯಿಗಳ ಸಹಕಾರ
ಪುತ್ತೂರು: ಪುತ್ತೂರು ತಾಲೂಕಿನ ಕುಂಬ್ರದ ‘ಅಮೃತ ಕ್ಲಿನಿಕ್’ನಲ್ಲಿ ಕಳೆದ ಹಲವು ವರ್ಷಗಳಿಂದ ಸಾರ್ವಜನಿಕರಿಗೆ ನಿರಂತರವಾಗಿ ಅತ್ಯುತ್ತಮ ವೈದ್ಯಕೀಯ ಸೇವೆ ನೀಡುತ್ತಾ, ಅಪಾರ ಜನಮನ್ನಣೆ ಗಳಿಸಿರುವ ಪಾರಂಪರಿಕ ಶೈಲಿಯ ಜನಪ್ರಿಯ ಕುಟುಂಬ ವೈದ್ಯ ಡಾ. ವಿಘ್ನೇಶ್ವರ ಭಟ್ ಅವರು ಸದ್ಯ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆಗಾಗಿ ಸಾರ್ವಜನಿಕರ ನೆರವಿನ ಹಸ್ತ ಚಾಚಿದ್ದಾರೆ.
ಕಳೆದ 2-3 ತಿಂಗಳುಗಳಿಂದ ದೈಹಿಕ ಅನಾರೋಗ್ಯ ಎದುರಿಸುತ್ತಿದ್ದ ಅವರಿಗೆ ವೈದ್ಯಕೀಯ ಪರೀಕ್ಷೆಗಳ ನಂತರ ತೀವ್ರತರದ ರಕ್ತದ ಕ್ಯಾನ್ಸರ್ (T-Cell Lymphoma) ಇರುವುದು ಪತ್ತೆಯಾಗಿದೆ. ಸದ್ಯ ಮಂಗಳೂರಿನ ಎಂ.ಐ.ಓ (Mangalore Institute of Oncology) ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಇವರಿಗೆ ಈಗಾಗಲೇ ಸುಮಾರು 20 ಲಕ್ಷ ರೂ. ವೆಚ್ಚವಾಗಿದೆ. ಮುಂದಿನ ಹಂತದ ಅಸ್ಥಿಮಜ್ಜೆ ಕಸಿ (Bone Marrow Transplant) ಹಾಗೂ ಇತರ ತುರ್ತು ಚಿಕಿತ್ಸೆಗಳಿಗಾಗಿ ಇನ್ನೂ ಅಂದಾಜು 20 ಲಕ್ಷ ರೂಪಾಯಿಗಳ ಅವಶ್ಯಕತೆಯಿದೆ. ವೈದ್ಯಕೀಯ ವೃತ್ತಿಯನ್ನೇ ನಂಬಿಕೊಂಡಿದ್ದ ಅವರಿಗೆ ಈ ಬೃಹತ್ ಮೊತ್ತವನ್ನು ಹೊಂದಿಸುವುದು ಕಷ್ಟಸಾಧ್ಯವಾಗಿರುವುದರಿಂದ ಸಹೃದಯಿ ಜನರಲ್ಲಿ ಧನಸಹಾಯಕ್ಕಾಗಿ ವಿನಂತಿಸಿಕೊಂಡಿದ್ದರು.

ಕೋಮು ಸೌಹಾರ್ದತೆ ಮೆರೆದ ಶೇಕಮಲೆ ಮಸೀದಿ ಸಮಿತಿ: ಡಾ. ವಿಘ್ನೇಶ್ವರ ಭಟ್ ಅವರ ಕಷ್ಟಕ್ಕೆ ಸ್ಪಂದಿಸಿ ಇತ್ತೀಚೆಗೆ ಶೇಕಮಲೆ ಮಸೀದಿ ಕಮಿಟಿಯವರು “ಮಾನವೀಯತೆಯ ಬಕ್ರೀದ್” ಎಂಬ ಆಶಯದೊಂದಿಗೆ ಚಿಕಿತ್ಸೆಗೆ ಆರ್ಥಿಕ ನೆರವು ನೀಡುವ ಮೂಲಕ ಕೋಮು ಸೌಹಾರ್ದತೆ ಮತ್ತು ಜಾತಿಗೆ ತೀತವಾದ ಮಾನವೀಯ ಗುಣವನ್ನು ಸಾರಿದ್ದಾರೆ. ಇವರ ಈ ಕಾರ್ಯ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆಗೆ ಪಾತ್ರವಾಗಿದೆ.

ವಿದೇಶಿ ಉದ್ಯಮಿ ಎಡಕ್ಕಾನ ಮಹಾಬಲೇಶ್ವರ ಶ್ಯಾಂ ಭಟ್ ನೆರವು: ಇದೀಗ ಡಾಕ್ಟರ್ ಅವರ ಚಿಕಿತ್ಸೆಗೆ ಮತ್ತೊಂದು ಆಸರೆಯಾಗಿ ಹೊರದೇಶದ ಖ್ಯಾತ ಉದ್ಯಮಿ ಎಡಕ್ಕಾನ ಮಹಾಬಲೇಶ್ವರ ಶ್ಯಾಂ ಭಟ್ ಅವರು 50,000 ರೂ. ಆರ್ಥಿಕ ಸಹಾಯ ಹಸ್ತ ಚಾಚುವ ಮೂಲಕ ತಮ್ಮ ಉದಾರಿ ಗುಣವನ್ನು ಮೆರೆದಿದ್ದಾರೆ. ಇವರೊಂದಿಗೆ ಹಲವಾರು ಸಹೃದಯಿ ಸಾರ್ವಜನಿಕರು ಕೂಡ ಈಗಾಗಲೇ ತಮ್ಮ ಕೈಲಾದ ಧನಸಹಾಯವನ್ನು ಒದಗಿಸಿದ್ದಾರೆ.
ಇನ್ನೂ ಬೇಕಿದೆ ಸಹೃದಯಿಗಳ ಸಹಕಾರ: ಬಡವರ, ಸಾರ್ವಜನಿಕರ ಕಣ್ಣೊರೆಸುತ್ತಿದ್ದ ವೈದ್ಯರೊಬ್ಬರು ಇಂದು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ಇವರ ಮುಂದಿನ ಚಿಕಿತ್ಸೆ ಸುಗಮವಾಗಿ ಸಾಗಲು ಇನ್ನು ಕೂಡ ಭಾರಿ ಮೊತ್ತದ ನೆರವಿನ ಅಗತ್ಯವಿದೆ. ಹೀಗಾಗಿ ದೇಶ-ವಿದೇಶಗಳಲ್ಲಿರುವ ದಾನಿಗಳು, ಸಂಘ-ಸಂಸ್ಥೆಗಳು ಮತ್ತು ಸಾರ್ವಜನಿಕರು ಉದಾರವಾಗಿ ಧನಸಹಾಯ ಮಾಡುವ ಮೂಲಕ ಡಾ. ವಿಘ್ನೇಶ್ವರ ಭಟ್ ಅವರು ಶೀಘ್ರ ಗುಣಮುಖರಾಗಿ ಮತ್ತೆ ಜನಸೇವೆಗೆ ಮರಳುವಂತೆ ಸಹಕರಿಸಬೇಕಾಗಿ ವಿನಂತಿಸಲಾಗಿದೆ.
ಧನಸಹಾಯ ಮಾಡಬಯಸುವವರು ಈ ಕೆಳಗಿನ ಬ್ಯಾಂಕ್ ಖಾತೆಗೆ ಜಮೆ ಮಾಡಬಹುದು:
- ಬ್ಯಾಂಕ್ ಹೆಸರು: ಕರ್ಣಾಟಕ ಬ್ಯಾಂಕ್ (Karnatāka Bank)
- ಶಾಖೆ: ದರ್ಬೆ, ಪುತ್ತೂರು
- ಖಾತೆ ಸಂಖ್ಯೆ (A/c No): 1023202500000601
- ಐಎಫ್ಎಸ್ಸಿ ಕೋಡ್ (IFSC): KARB0001023
- ಗೂಗಲ್ ಪೇ ಸಂಖ್ಯೆ (G-Pay): 961163784



-
crime3 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime4 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala2 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala5 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 weeks agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
-
Dakshina Kannada6 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala5 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala4 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
