Bantawala
ಎರಡನೇ ದಿನವೂ ಕೇಪು ಕಾನೂನು ಬಾಹಿರ ಕೋಳಿ ಅಂಕಕ್ಕೆ ಪೊಲೀಸ್ ದಾಳಿ.ಮಾಜಿ ಶಾಸಕ ಮಠಂದೂರು, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಸಹಿತ 27ಜನರ ವಿರುದ್ಧ ಪ್ರಕರಣ ದಾಖಲು. 20ಕೋಳಿ ವಶ.
ವಿಟ್ಲ : ಕೇಪು ದೈವಸ್ಥಾನದ ವಠಾರದಲ್ಲಿ ಎರಡನೇ ದಿನ ನಡೆದ ಅಕ್ರಮ ಕೋಳಿ ಅಂಕಕ್ಕೆ ವಿಟ್ಲ ಪೊಲೀಸರು ದಾಳಿ ನಡೆಸಿ 20 ಕೋಳಿಗಳ ವಶಕ್ಕೆ ಪಡೆದು 27 ಜನರ ವಿರುದ್ದ ಪ್ರಕರಣ ದಾಖಲಿಸಿದ್ದಾರೆ.
ಶನಿವಾರದಂದು ಶಾಸಕ ಅಶೋಕ್ ರೈ ಸಮ್ಮುಖದಲ್ಲೇ ಕಾನೂನು ಬಾಹಿರವಾಗಿ ಕೋಳಿ ಅಂಕ ನಡೆಯುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದರು. ಶಾಸಕ ಅಶೋಕ್ ರೈ, ಕೋಳಿ ಅಂಕಕ್ಕೆ ಜಾಗ ನೀಡಿದ ಮಾಲಿಕ ಮುರಳೀಧರ ರೈ ಸಹಿತ ಹದಿನೇಳು ಜನರ ವಿರುದ್ಧ ಪ್ರಕರಣ ದಾಖಲಿಸಿ 22ಕೋಳಿಗಳ ವಶಕ್ಕೆ ಪಡೆದಿದ್ದರು. ಎರಡನೇ ದಿನವಾದ ಭಾನುವಾರ ಬೆಳಿಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, ಮಾಜಿ ಶಾಸಕ ಸಂಜೀವ ಮಠಂದೂರು ಸಹಿತ ಹಲವು ಮುಖಂಡರು ಕೇಪು ದೈವಸ್ಥಾನಕ್ಕೆ ಬಂದಿದ್ದರು. ಅವರ ಸಮ್ಮುಖದಲ್ಲೇ ಎರಡನೇ ದಿನದ ಅಕ್ರಮ ಕೋಳಿ ಅಂಕ ಆರಂಭವಾಗಿತ್ತು.

ಕೇಪು ಗ್ರಾಮದ ಮುರಳೀಧರ ರೈ ಎಂಬವರ ಗದ್ದೆಯಲ್ಲಿ, ಹಲವಾರು ಜನರು ಗುಂಪು ಸೇರಿಕೊಂಡು ಹಿಂಸಾತ್ಮಕವಾಗಿ ಕೋಳಿ ಅಂಕ ನಡೆಸುತ್ತಿದ್ದಾಗ ಪೊಲೀಸರು ದಾಳಿ ನಡೆಸಿದ್ದಾರೆ. ಅಲ್ಲಿ ನೆರೆದಿದ್ದ ಜನರಿಗೆ ಅಕ್ರಮ ಕೋಳಿ ಅಂಕದ ಬಗ್ಗೆ ಪೊಲೀಸರು ಕಾನೂನು ತಿಳುವಳಿಕೆ ನೀಡಿದರೂ, ಸೇರಿದ್ದ ಜನರು ಸ್ಥಳದಿಂದ ತೆರಳದೇ ಭಾಗಿಯಾಗಿದ್ದಾರೆ. ಸ್ಥಳದಲ್ಲಿ ಹಾಜರಿದ್ದ ಮಾಜಿ ಶಾಸಕ ಸಂಜೀವ ಮಠಂದೂರು, ಮುರಳೀಧರ ರೈ, ಸತೀಶ ಕುಂಪಲ, ದಯಾನಂದ ಉಜಿರೆಮಾರು, ಹರಿಪ್ರಸಾದ್ ಯಾದವ್, ಅಶೋಕ ಶೆಟ್ಟಿ ವಿಟ್ಲ ಮತ್ತು ರಾಜೇಶ್ ಬಾಳೆಕಲ್ಲು ಸಹಿತ 27ಜನರ ವಿರುದ್ಧ ಪ್ರಕರಣ ದಾಖಲಾಗಿದೆ.
ಕೃತ್ಯದಲ್ಲಿ ತೊಡಗಿದ್ದ 20 ಜನರನ್ನು ವಶಕ್ಕೆ ಪಡೆದು, ಸ್ಥಳದಲ್ಲಿದ್ದ 20 ಹುಂಜ ಕೋಳಿಗಳನ್ನು ಹಾಗೂ ಕೋಳಿ ಅಂಕಕ್ಕೆ ಬಳಸುವ ಕತ್ತಿ (ಬಾಲು)ಗಳನ್ನು ಸ್ವಾಧೀನಪಡಿಸಲಾಗಿದೆ.
ವಿಟ್ಲ ಪೊಲೀಸ್ ಠಾಣೆಯಲ್ಲಿ ಅ.ಕ್ರ: 191/2025, ಕಲಂ: 189(2), 49, 221, 223, 190 BNS 2023 ಮತ್ತು 3, 11 PREVENTION OF CRUELTY TO ANIMALS ACT ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಜಿಲ್ಲಾ ಎಸ್ಪಿಯವರು ತಿಳಿಸಿದ್ದಾರೆ.
Bantawala
ವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
ಹೌದು..ತುಳುನಾಡಿನ ಪರಂಪರೆಯೇ ಹೀಗೆ..ಎಲ್ಲೂ ನ್ಯಾಯ ಸಿಗದಿದ್ದಾಗ ಕೊನೆಯದಾಗಿ ನೊಂದವರು ಹೋಗುವುದು ದೈವದ ಸನ್ನಿಧಿಗೆ..ಇದು ತುಳುನಾಡಿನಲ್ಲಿ ಹಿಂದಿನಿಂದಲೂ ನಡೆದು ಬಂದ ರೂಢಿಯಾಗಿದೆ. ನಮ್ಮ ಸಮಾಜದಲ್ಲಿ ದೈವಭಕ್ತಿ ಮತ್ತು ನಂಬಿಕೆ ಅನಾದಿಕಾಲದಿಂದಲೂ ಮಹತ್ವ ಪಡೆದಿದೆ. ಇತ್ತೀಚೆಗೆ ಕರಾವಳಿ ಪ್ರದೇಶದ ವಿಟ್ಲದಲ್ಲಿ ನಡೆದ ಒಂದು ಘಟನೆ ಈ ನಂಬಿಕೆಯನ್ನು ಮತ್ತಷ್ಟು ಬಲಪಡಿಸುವಂತಾಗಿದೆ.
ಮನೆಯಲ್ಲಿದ್ದ ಎರಡು ಗೋವುಗಳನ್ನು ಕಳ್ಳ ಕದ್ದು ಖಸಾಯಿಖಾನೆಗೆ ಮಾರಾಟ ಮಾಡಿದಾಗ, ಗೋವುಗಳನ್ನು ಕಳೆದುಕೊಂಡ ಮಾಲಿಕರು ಪೊಲೀಸರಿಗೆ ದೂರು ನೀಡಿದರೂ, ಕಳ್ಳನ ಪತ್ತೆ ಸಾಧ್ಯವಾಗಲಿಲ್ಲ. ನಿರಾಶರಾದ ಮಾಲಿಕರು ತಮ್ಮ ಮನೆಯ ಆರಾಧ್ಯ ದೈವವಾದ ಕಲ್ಲುರ್ಟಿ ದೈವದ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮುಂದೆ ಏನಾಯಿತು ಎಂಬುವುದೇ ದೈವದ ಕಾರಣೀಕ ಶಕ್ತಿ….ಕಲ್ಲುರ್ಟಿ ದೈವದ ಮುಂದೆ ಬಂದು ದನ ಕಳ್ಳತನ ಮಾಡಿದ್ದನ್ನು ತಪ್ಪೊಪ್ಪಿಕೊಂಡ ಕುಖ್ಯಾತ ಗೋಕಳ್ಳ..
ದೈವದ ನ್ಯಾಯ – ಭಕ್ತಿಗೆ ಎಚ್ಚರಿಕೆ ನೀಡಿದ ನಿಜ ಘಟನೆ
ಕಳೆದ ವರ್ಷ ಗಣೇಶ ಚತುರ್ಥಿ ದಿನದಂದು ವಿಟ್ಲ ಹೊರವಲಯದ ಮಂಗಲಪದವು ಭಜನಾ ಮಂದಿರದ ಪರಿಸರದಲ್ಲಿ ರಾತ್ರಿ ಹೊತ್ತು ಮಲಗಿದ್ದ ನ್ಯಾಯವಾದಿ ಶಿವಾನಂದ ವಿಟ್ಲ ಅವರ ಎರಡು ಗಿರ್ ಜಾತಿಯ ಎತ್ತುಗಳು ನಾಪತ್ತೆಯಾಗಿದ್ದವು. ಈ ಬಗ್ಗೆ ಎತ್ತುಗಳ ಮಾಲಿಕ ಶಿವಾನಂದ ವಿಟ್ಲ ಪೊಲೀಸರಿಗೆ ದೂರು ಕೂಡಾ ನೀಡಿದ್ದರು. ಪೊಲೀಸರ ತನಿಖೆಯಲ್ಲಿ ಬ್ರೆಝಾ ಕಾರಿನಲ್ಲಿ ಬಂದ ಕುಖ್ಯಾತ ಅಂತರ್ ರಾಜ್ಯ ಗೋಕಳ್ಳರು ಎರಡು ಎತ್ತುಗಳನ್ನು ಕಳ್ಳತನ ಮಾಡಿರುವ ಬಗ್ಗೆ ಖಚಿತ ಮಾಹಿತಿಯೂ ಲಭ್ಯವಾಗಿತ್ತು. ಆದರೆ ಆರೋಪಿಗಳ ಬಂಧನಕ್ಕಾಗಿ ಪೊಲೀಸರು ಎಷ್ಟೇ ಹುಡುಕಾಡಿದ್ದರೂ ಚಾಲಾಕಿ ಗೋಕಳ್ಳರು ಮಾತ್ರ ಈವರೆಗೂ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸುವಲ್ಲಿ ಯಶಸ್ವಿಯಾಗಿದ್ದಾರೆ.

ದೈವದ ಮೊರೆ ಹೋದ ಮಾಲಿಕ ಶಿವಾನಂದ..
ತಮ್ಮ ಮನೆಮಕ್ಕಳಿಗಿಂತಲೂ ಹೆಚ್ಚಾಗಿ ಪ್ರೀತಿಯಿಂದ ಗೋವುಗಳನ್ನು ಸಲಹುತ್ತಿರುವ ನ್ಯಾಯವಾದಿ ಶಿವಾನಂದ ವಿಟ್ಲ ಎತ್ತುಗಳು ನಾಪತ್ತೆಯಾದ ಬಳಿಕ ತೀವ್ರವಾಗಿ ನೊಂದುಕೊಂಡಿದ್ದರು. ಇದಾದ ಕೆಲದಿನಗಳ ಬಳಿಕ ನಾಪತ್ತೆಯಾಗಿದ್ದ ರಾಮ-ಲಕ್ಷ್ಮಣ ಜೋಡಿ ಎತ್ತುಗಳು ಮರಳಿ ಬರುವ ಆಸೆಗಳೇ ಕಮರಿಹೋಗಿತ್ತು. ಅಂತಿಮವಾಗಿ ತಾವು ನಂಬುವ ಕೆಲಿಂಜ ಉಳ್ಳಾಲ್ತಿ ಅಮ್ಮನವರ ಮೂಲಸ್ಥಾನವಾಗಿರುವ ಮಡಿವಾಳ ಕೋಡಿ ಕೆಳಗಿನಕೆಲಿಂಜದ ಕಲ್ಲುರ್ಟಿ ದೈವದ ಮುಂದೆ ಕಣ್ಣೀರು ಸುರಿಸಿ ಗೋಕಳ್ಳರಿಗೆ ನೀನೇ ಸರಿಯಾದ ಶಿಕ್ಷೆ ನೀಡಬೇಕೆಂದು ಪ್ರಾರ್ಥಿಸಿದರು.
ಗೋಕಳ್ಳರಿಗೆ ಮುನಿದ ದೈವ..
ಗೋಕಳ್ಳರು ಯಾರು, ಎಲ್ಲಿಯವರೆಂಬ ಬಗ್ಗೆ ಸಾರ್ವಜನಿಕವಾಗಿ ಸುದ್ದಿ ಹರಿದಾಡುತ್ತಿದ್ದರೂ ಪೊಲೀಸರ ಕೈಗೆ ಮಾತ್ರ ಖದೀಮರು ಸಿಗದೇ ಕಣ್ಣುಮುಚ್ಚಾಲೆ ಆಡುತ್ತಿದ್ದರು. ಮಾಲಿಕ ಶಿವಾನಂದರು ದೈವದ ಮೊರೆ ಹೋದ ಕೆಲ ದಿನಗಳಲ್ಲೇ ಕುಖ್ಯಾತ ಗೋಕಳ್ಳರ ಕಾರು ಗೋವುಗಳನ್ನು ಕದ್ದು ತರುತ್ತಿದ್ದಾಗ ಸಕಲೇಶಪುರ ಠಾಣಾ ವ್ಯಾಪ್ತಿಯಲ್ಲಿ ಪಲ್ಟಿ ಹೊಡೆದು ಅಲ್ಲಿನ ಪೊಲೀಸರ ವಶವಾಗಿತ್ತು. ಇದಾದ ಕೆಲದಿನಗಳ ಬಳಿಕ ಅದೇ ಗೋಕಳ್ಳರು ಕೇರಳದಲ್ಲಿ ಪೊಲೀಸರ ಬಲೆಗೆ ಸಿಲುಕಿ ಹೈರಾಣರಾದರು.
ಕೈಕೊಟ್ಟ ಅನಾರೋಗ್ಯ..
ಗೋಕಳ್ಳರಿಗೆ ಒಂದರ ಮೆಲೊಂದು ಬರಸಿಡಿಲಿನಂತೆ ಕಷ್ಟಗಳು ಬೆನ್ನುಬಿದ್ದವು. ಐವರ ತಂಡದ ಗೋಕಳ್ಳರ ಮುಖಂಡನಿಗೆ ಅನಾರೋಗ್ಯ ಕಾಡತೊಡಗಿತು. ರಕ್ತ ವಾಂತಿಯಿಂದ ಆರಂಭವಾದ ಅನಾರೋಗ್ಯ ಈತನ ಬದುಕನ್ನೇ ಹಿಂಡಿ ಹಿಪ್ಪೆಯಾಗಿಸಿತು. ರಾತ್ರಿ ಹೊತ್ತು ಮಲಗಿದ್ದಲ್ಲಿಯೇ ಕಿರುಚಾಟ, ಚೀರಾಟ ಆರಂಭವಾಗಿ ಅಕ್ಷರಶಃ ಮಾನಸಿಕ ರೋಗಿಯಂತಾಗಿದ್ದಾನೆ.
ಹಲವಾರು ಕಡೆಗಳಲ್ಲಿನ ತಜ್ಞ ವೈದ್ಯರ ಬಳಿ ಕರೆದೊಯ್ದು ಎಲ್ಲಾ ರೀತಿಯ ಪರೀಕ್ಷೆಗೊಳಪಡಿಸಿದರೂ ಯಾವುದೇ ಫಲಿತಾಂಶವಿಲ್ಲ. ಕೊನೆಗೆ ತಮ್ಮದೇ ಧರ್ಮಗುರುವೊಬ್ಬರ ಬಳಿಗೆ ಅನಾರೋಗ್ಯ ಪೀಡಿತನ ಕರೆದೊಯ್ದು ವಿಚಾರ ತಿಳಿಸಿದ್ದಾರೆ. ಆ ಸಮಯ ಈತನ ಹಿನ್ನೆಲೆ ಕೆದಕಿದ ಪ್ರಸಿದ್ಧ ಧರ್ಮಗುರು ಕಲ್ಲುರ್ಟಿ ದೈವದ ಶಾಪ ವಿಮೋಚನೆ ಮಾಡಬೇಕೆಂದೂ ಇಲ್ಲವಾದರೆ ಕೆಲ ದಿನಗಳಲ್ಲೇ ರಕ್ತವಾಂತಿ ಮಾಡಿ ಸಾಯುವ ಬಗ್ಗೆ ಮುನ್ಸೂಚನೆ ನೀಡಿದ್ದರೆನ್ನದಾಗಿದೆ.
ದೈವದ ಮುಂದೆ ತಪ್ಪೊಪ್ಪಿಕೊಂಡ ಗೋಕಳ್ಳ..
ಧರ್ಮ ಗುರುವಿನ ಅಣತಿಯಂತೆ ಗೋಕಳ್ಳತನ ನಡೆಸಿದ ವಿಟ್ಲ ಠಾಣಾ ವ್ಯಾಪ್ತಿಯ ಪರಿಚಯಸ್ಥರೊಬ್ಬರ ಮೂಲಕ ಮಂಗಲಪದವು ಎತ್ತುಗಳ ಮಾಲಿಕರ ಸಂಪರ್ಕಿಸಿ ವಿಚಾರ ನಡೆಸಿದರು. ಆ ಸಮಯ ಪ್ರೀತಿಯ ಎತ್ತುಗಳು ನಾಪತ್ತೆಯಾದ ಬಗ್ಗೆ ಮನನೊಂದು ಕಲ್ಲುರ್ಟಿ ದೈವದ ಮೊರೆ ಹೋಗಿದ್ದೇನೆ ಎಂದು ನ್ಯಾಯವಾದಿ ಶಿವಾನಂದ ವಿಟ್ಲ ಮನಸು ಬಿಚ್ಚಿ ಹೇಳಿದ್ದಾರೆ. ಈ ಬಗ್ಗೆ ಪರಿಹಾರಕ್ಕಾಗಿ ನಾವು ದೈವದ ಮುಂದೆ ಬರುತ್ತೇವೆಂದು ಅನಾರೋಗ್ಯ ಪೀಡಿತ ಗೋಕಳ್ಳ ವಿನಂತಿಸಿದ್ದಾನೆ. ಅದರಂತೆ ಮಂಗಳವಾರ ರಾತ್ರಿ ಕೆಳಗಿನಕೆಲಿಂಜದಲ್ಲಿ ಕಲ್ಲುರ್ಟಿ ದೈವದ ದರ್ಶನ ಸೇವೆ ನಡೆಯುತ್ತಿರುವ ಸಂದರ್ಭ ದೈವದ ಮುಂದೆ ಹಾಜರಾಗಿ ತಪ್ಪೊಪ್ಪಿಗೆ ಹೇಳಿಕೆ ನೀಡಿರುವುದು ದೈವಗಳ ತವರೂರು ತುಳುನಾಡಿನ ಧಾರ್ಮಿಕ ನಂಬಿಕೆ ಮತ್ತು ಶಕ್ತಿಗೆ ಪುಷ್ಟಿ ನೀಡಿದೆ.
ಮುಂದೆ ನಿಂತಿರುವ ಆರೋಪಿ ವ್ಯಕ್ತಿ ತನ್ನೆಲ್ಲಾ ತಪ್ಪುಗಳ ದೈವದೆದುರು ಎಳೆಎಳೆಯಾಗಿ ಬಿಚ್ಚಿಟ್ಟ ಬಳಿಕ ದರ್ಶನದ ದೈವ ಪಾತ್ರಿ ನೀನು ಮಾಡಿದ ತಪ್ಪು ಕೆಲಸಕ್ಕಾಗಿ ನನ್ನ ಮಂಚದಲ್ಲಿ ಶಾಶ್ವತವಾಗಿ ಬೆಳ್ಳಿಯ ಗೋವು ನೆಲೆಯಾಗಬೇಕು. ಅದು ನಿನಗೆ ಸಾಧ್ಯವೇ ಎಂದು ಪ್ರಶ್ನಿಸಿದೆ. ನೂರಾರು ಭಕ್ತರ ಸಮ್ಮುಖದಲ್ಲೇ ದೈವದ ಮಾತಿಗೆ ಅನಾರೋಗ್ಯ ಪೀಡಿತ ಆರೋಪಿ ಸ್ಥಾನದಲ್ಲಿರುವ ಯುವಕ ಒಪ್ಪಿಗೆ ಸೂಚಿಸಿದ್ದು ಬರುವ ತಿಂಗಳು ವಾರ್ಷಿಕ ಕೋಲದ ಮೊದಲು ಹರಕೆ ರೂಪವಾಗಿ ಬೆಳ್ಳಿಯ ಗೋವು ತಂದೊಪ್ಪಿಸುತ್ತೇನೆ. ಇನ್ಮುಂದೆ ಯಾವುದೂ ಕೆಟ್ಟ ಕೆಲಸ ಮಾಡುವುದಿಲ್ಲ ಎಂದು ಕೈಮುಗಿದು ಪ್ರಾರ್ಥಿಸಿದ ಬಳಿಕ ದೈವವು ಪ್ರಸಾದ ನೀಡಿದೆ.
ಅಂತೂ ತುಳುನಾಡಿನ ದೈವ ಕಲ್ಲುರ್ಟಿ ಗೋಕಳ್ಳನಿಗೆ ತನ್ನ ಶಕ್ತಿ ಏನೆಂಬುದನ್ನು ತೋರಿಸಿರುವುದು ಭಕ್ತರ ಪಾಲಿಗೆ ದೈವದ ಮೇಲಿನ ನಂಬಿಕೆಯನ್ನು ಇಮ್ಮಡಿಗೊಳಿಸಿದೆ.

accident
ಬಂಟ್ವಾಳ: ರಸ್ತೆ ದಾಟುತ್ತಿದ್ದ ಮಹಿಳೆಗೆ ಕಾರು ಡಿಕ್ಕಿ – ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆ!
ಮಂಗಳೂರು: ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ನಡೆದಿದೆ.
ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ನಿವಾಸಿ ಭಾರತಿ (48) ಅಪಘಾತಕ್ಕೀಡಾದ ಮಹಿಳೆ. ಇವರು ತನ್ನ ಮಗಳು ದೀಪ್ತಿ ಅವರೊಂದಿಗೆ ಸಜಿಪಮುನ್ನೂರಿನ ಗುಳಿಗಜ್ಜನ ಕಟ್ಟೆಗೆ ಕಾಣಿಕೆ ಹಾಕಲು ಬಂದಿದ್ದರು. ಕಾಣಿಕೆ ಮುಗಿಸಿ ವಾಪಸ್ಸಾಗುವಾಗ ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು ದಾಟಲು ಪ್ರಯತ್ನಿಸುತ್ತಿದ್ದರು. ಈ ವೇಳೆ ಮೆಲ್ಕಾರ್ ಕಡೆಯಿಂದ ಮುಡಿಪು ಕಡೆಗೆ ಅತೀ ವೇಗವಾಗಿ ಬಂದ ಬಿಳಿ ಬಣ್ಣದ ಕಾರು ಮಹಿಳೆಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಸಿಸಿಟಿವಿಯಲ್ಲಿ ಸೆರೆಯಾದ ದೃಶ್ಯ: ಡಿಕ್ಕಿಯ ರಭಸಕ್ಕೆ ಭಾರತಿ ಅವರು ಗಾಳಿಯಲ್ಲಿ ಹಾರಿ ರಸ್ತೆಯ ಬದಿಗೆ ಬಿದ್ದಿದ್ದಾರೆ. ಅಪಘಾತದ ಭೀಕರ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆ ಸ್ಥಳೀಯರು ಮತ್ತು ವಾಹನ ಸವಾರರು ತಕ್ಷಣ ಸಹಾಯಕ್ಕೆ ಧಾವಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವ ಭಾರತಿ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಘಟನೆಗೆ ಸಂಬಂಧಿಸಿದಂತೆ ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
award
ಮಂಗಳೂರು ವಿಶ್ವವಿದ್ಯಾಲಯ: ಸುಶ್ಮಿತ ಸಿ.ಎಚ್. ಅವರಿಗೆ ಅನ್ವಯಿಕ ಸಸ್ಯಶಾಸ್ತ್ರದಲ್ಲಿ ಪಿಎಚ್.ಡಿ ಪದವಿ ಪ್ರದಾನ
ಮಂಗಳೂರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಸುಶ್ಮಿತ ಸಿ.ಎಚ್. ಅವರು ಮಂಡಿಸಿದ ಸಂಶೋಧನಾ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾಲಯವು ಪಿಎಚ್.ಡಿ ಪದವಿ ನೀಡಿ ಗೌರವಿಸಿದೆ.

ಅವರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಡಾ. ಕೃಷ್ಣಕುಮಾರ್ ಜಿ. ಅವರ ಮಾರ್ಗದರ್ಶನದಲ್ಲಿ “Antidiabetic activities of Syzygium hemisphericum (Wight) Alston and Syzygium kanarense (Talbot) Raizada” (ಸಿಜಿಜಿಯಂ ಹೆಮಿಸ್ಫೆರಿಕಂ ಮತ್ತು ಸಿಜಿಜಿಯಂ ಕೆನರೆನ್ಸ್ ಸಸ್ಯಗಳ ಮಧುಮೇಹ ವಿರೋಧಿ ಚಟುವಟಿಕೆಗಳು) ಎಂಬ ವಿಷಯದ ಬಗ್ಗೆ ಸಂಶೋಧನೆ ನಡೆಸಿದ್ದರು.

2025ರ ಅಕ್ಟೋಬರ್ನಲ್ಲಿ ತಮ್ಮ ಸಂಶೋಧನೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ್ದ ಇವರಿಗೆ, 2026ರ ಮಾರ್ಚ್ 28ರಂದು ನಡೆದ ಮಂಗಳೂರು ವಿಶ್ವವಿದ್ಯಾಲಯದ 44ನೇ ವಾರ್ಷಿಕ ಪದವಿ ಪ್ರದಾನ ಸಮಾರಂಭದಲ್ಲಿ ಅಧಿಕೃತವಾಗಿ ಪಿಎಚ್.ಡಿ ಪದವಿಯನ್ನು ಪ್ರದಾನ ಮಾಡಲಾಯಿತು.
ಡಾ. ಸುಶ್ಮಿತ ಅವರು ಪ್ರಸಿದ್ಧ ಯಕ್ಷಗಾನ ಭಾಗವತರಾದ ಶ್ರೀ ಕಣಿಯೂರು ಸೂರ್ಯನಾರಾಯಣ ಭಟ್ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲದ ಉದ್ಯೋಗಿ ಶ್ರೀಮತಿ ಆಶಾಪಾರ್ವತಿ ದಂಪತಿಯ ಪುತ್ರಿ. ಇವರು ಯುವ ಉದ್ಯಮಿ ಶ್ರೀ ಕೃಷ್ಣ ವಿಕಾಸ್ ಅವರ ಪತ್ನಿಯಾಗಿದ್ದಾರೆ.

ತಮ್ಮ ಈ ಶೈಕ್ಷಣಿಕ ಸಾಧನೆಗೆ ಬೆನ್ನೆಲುಬಾಗಿ ನಿಂತ ತಂದೆ-ತಾಯಿ, ಸಹೋದರಿ ಹಾಗೂ ಪತಿಯವರ ನಿರಂತರ ಪ್ರೋತ್ಸಾಹ ಮತ್ತು ಬೆಂಬಲಕ್ಕೆ ಡಾ. ಸುಶ್ಮಿತ ಅವರು ಈ ಸಂದರ್ಭದಲ್ಲಿ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿದ್ದಾರೆ. ಇವರು ಪ್ರಸ್ತುತ ಮಂಗಳೂರು ವಿಶ್ವವಿದ್ಯಾಲಯದ ಅನ್ವಯಿಕ ಸಸ್ಯಶಾಸ್ತ್ರ ವಿಭಾಗದಲ್ಲೇ ಉಪನ್ಯಾಸಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.
-
crime3 days agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
crime2 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
Bantawala3 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
Dakshina Kannada3 months agoಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ
-
Bantawala2 months agoಕುದ್ರಿಯ ತರವಾಡು ಮನೆಯಲ್ಲಿ ಸಂಕ್ರಮಣದಂದು ರಣಾಂಗಣ; ಅಧ್ಯಕ್ಷ, ಟ್ರಸ್ಟಿ ಮೇಲೆ ಮಾರಣಾಂತಿಕ ಹಲ್ಲೆ
-
Bantawala3 months agoವಿಟ್ಲದಲ್ಲಿ ಶಾರ್ಟ್ ಸರ್ಕ್ಯೂಟ್..ಶ್ರೀ ಎಲೆಕ್ಟ್ರಾನಿಕ್ಸ್ ,ಅಮಿತ್ ಹೋಟೆಲ್..ಸೇರಿ ಐದಾರು ಕಟ್ಟಡಗಳು ಸಂಪೂರ್ಣ ಬೆಂಕಿಗಾಹುತಿ..
-
Bantawala1 month agoವಿಟ್ಲ ಮೈತ್ರೇಯಿ ಗುರುಕುಲದ ವಿದ್ಯಾರ್ಥಿನಿ ವೈಗ ಲಕ್ಷ್ಮಿ(15) ಆತ್ಮಹತ್ಯೆ ? ; ಫೆ. 22ರಂದು ಗುರುಕುಲದಿಂದ ನಾಪತ್ತೆಯಾದ 10ನೇ ತರಗತಿ ವಿದ್ಯಾರ್ಥಿನಿ
-
crime2 months agoಸಂತ ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಎಲಿಯಾಸ್ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ: ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ
