Connect with us

Problems

ಪುತ್ತೂರು: 34ನೇ ನೆಕ್ಕಿಲಾಡಿ ತ್ಯಾಜ್ಯ ಘಟಕದಲ್ಲಿ ಅಕ್ರಮ ಕಸ ಹೂಳುವಿಕೆ – ಸಾರ್ವಜನಿಕರ ಆಕ್ರೋಶ, ಉಗ್ರ ಪ್ರತಿಭಟನೆಯ ಎಚ್ಚರಿಕೆ!

Published

on

ಪುತ್ತೂರು: ಸ್ವಚ್ಛ ಗ್ರಾಮ ಪ್ರಶಸ್ತಿ ಪಡೆದ 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಶಾಂತಿನಗರದ ಕಲ್ಪಣೆ ಬಳಿ ಇರುವ ಘನ ತ್ಯಾಜ್ಯ ನಿರ್ವಹಣಾ ಘಟಕ (SWM) ಇದೀಗ ನರಕಸಾದೃಶ ವಾತಾವರಣಕ್ಕೆ ಸಾಕ್ಷಿಯಾಗಿದೆ. ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡಬೇಕಾದ ಪಂಚಾಯತ್, ಘಟಕದ ಹಿಂಭಾಗದಲ್ಲಿ ಗುಂಡಿ ತೋಡಿ ಅಪಾಯಕಾರಿ ಕಸವನ್ನು ಭೂಮಿಯೊಳಗೆ ಹೂತುಹಾಕುತ್ತಿರುವ ಬೃಹತ್ ಅಕ್ರಮ ಬಯಲಿಗೆ ಬಂದಿದ್ದು, ಸ್ಥಳೀಯರು ಪಂಚಾಯತ್ ಆಡಳಿತದ ವಿರುದ್ಧ ಕೆಂಡಮಂಡಲರಾಗಿದ್ದಾರೆ.

ವೈಜ್ಞಾನಿಕ ವಿಲೇವಾರಿಗೆ ಎಳ್ಳುನೀರು — ಭೂಮಿಯೊಳಗೆ ಕಸದ ರಾಶಿ! ಗ್ರಾಮಸ್ಥರಿಂದ ಪ್ರತಿ ತಿಂಗಳು ತ್ಯಾಜ್ಯ ನಿರ್ವಹಣಾ ಶುಲ್ಕ ವಸೂಲಿ ಮಾಡುತ್ತಿರುವ ಪಂಚಾಯತ್, ಮನೆ ಮನೆಗಳಿಂದ ಸಂಗ್ರಹಿಸಿದ ಪ್ಲಾಸ್ಟಿಕ್ ಕಸ, ಸ್ಯಾನಿಟರಿ ಪ್ಯಾಡ್, ಪ್ಯಾಂಪ್ಸ್‌ ಹಾಗೂ ಹಸಿ ತ್ಯಾಜ್ಯವನ್ನು ಎಂಆರ್‌ಎಫ್ (MRF) ಘಟಕಕ್ಕೆ ರವಾನಿಸುವ ಬದಲು ಘಟಕದ ಹಿಂಭಾಗದಲ್ಲಿ ಹಿಟಾಚಿ ಮೂಲಕ ಗುಂಡಿ ತೋಡಿ ಮುಚ್ಚುತ್ತಿದೆ. ಮೂರು-ನಾಲ್ಕು ವರ್ಷಗಳ ಹಿಂದೆ ಆರಂಭಗೊಂಡ ಈ ಘಟಕದಲ್ಲಿ ಒಣ ಕಸ ವಿಂಗಡಣೆ ಹಾಗೂ ಹಸಿ ಕಸದಿಂದ ಗೊಬ್ಬರ ತಯಾರಿಸುವ ಭರವಸೆ ನೀಡಲಾಗಿತ್ತು. ಆದರೆ, ಕಳೆದ ಎರಡು ವರ್ಷಗಳಿಂದ ಸಂಗ್ರಹವಾದ ಪ್ಲಾಸ್ಟಿಕ್ ತ್ಯಾಜ್ಯ ಘಟಕದಲ್ಲೇ ಕೊಳೆಯುತ್ತಿದ್ದು, ಇಡೀ ಯೋಜನೆ ಈಗ ಹಳಿ ತಪ್ಪಿದೆ.

ಅಂತರ್ಜಲ ಕಲುಷಿತ, ಸಾಂಕ್ರಾಮಿಕ ರೋಗದ ಭೀತಿ ತ್ಯಾಜ್ಯವನ್ನು ಭೂಮಿಯಲ್ಲಿ ಹೂತು ಹಾಕುತ್ತಿರುವುದರಿಂದ ಮಣ್ಣು ಮತ್ತು ಅಂತರ್ಜಲ ಕಲುಷಿತಗೊಳ್ಳುವ ಭೀತಿ ಎದುರಾಗಿದೆ. ಕಸಾಯಿಖಾನೆಗಳ ಮಾಂಸದ ತ್ಯಾಜ್ಯ ಹಾಗೂ ಕೊಳೆತ ಆಹಾರವನ್ನು ತಂದು ಸುರಿಯುತ್ತಿರುವುದರಿಂದ ಇಡೀ ಶಾಂತಿನಗರ ಪರಿಸರದಲ್ಲಿ ದುರ್ವಾಸನೆ ಆವರಿಸಿದೆ. ಈ ಕಸದ ರಾಶಿಯಿಂದಾಗಿ ಬೀದಿ ನಾಯಿಗಳ ಹಾವಳಿ ವಿಪರೀತವಾಗಿದ್ದು, ಸಮೀಪದಲ್ಲೇ ಇರುವ ಅಂಗನವಾಡಿ, ಹಿರಿಯ ಪ್ರಾಥಮಿಕ ಶಾಲೆ, ಪ್ರೌಢಶಾಲೆಗೆ ತೆರಳುವ ಮಕ್ಕಳು ಹಾಗೂ ದೇವಸ್ಥಾನಕ್ಕೆ ಬರುವ ಭಕ್ತಾದಿಗಳು ಆತಂಕದಲ್ಲೇ ಸಂಚರಿಸುವಂತಾಗಿದೆ.

ಸಂಘ-ಸಂಸ್ಥೆಗಳ ಒಕ್ಕೂಟದಿಂದ ಉಗ್ರ ಹೋರಾಟದ ಎಚ್ಚರಿಕೆ ಈ ಹಿಂದೆ ಘಟಕ ಸ್ಥಾಪನೆಗೆ ಆಕ್ಷೇಪ ವ್ಯಕ್ತಪಡಿಸಿದಾಗ ವೈಜ್ಞಾನಿಕ ನಿರ್ವಹಣೆಯ ಮಾತುಕೊಟ್ಟಿದ್ದ ಅಧಿಕಾರಿಗಳು, ಈಗ ಸಾಲು ಸಾಲು ದೂರುಗಳನ್ನು ನೀಡಿದರೂ ಕಣ್ಣು ಮುಚ್ಚಿ ಕುಳಿತಿದ್ದಾರೆ. ಈ ಹಿನ್ನೆಲೆಯಲ್ಲಿ ಶಾಂತಿನಗರ ಶ್ರೀ ಮಹಾವಿಷ್ಣು ಸೇವಾ ಟ್ರಸ್ಟ್, ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಹಾಗೂ ತ್ರಿವೇಣಿ ಯುವಕ ಮಂಡಲ ಸೇರಿದಂತೆ ಗ್ರಾಮದ ಸಮಾನಮನಸ್ಕರು ತುರ್ತು ಸಭೆ ನಡೆಸಿದ್ದಾರೆ.

ಸಂಬಂಧಪಟ್ಟ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಕಸ ಹೂಳುವ ಪ್ರಕ್ರಿಯೆಯನ್ನು ತಡೆದು ಶಾಶ್ವತ ಪರಿಹಾರ ಕಲ್ಪಿಸಬೇಕು. ಇಲ್ಲವಾದಲ್ಲಿ 34ನೇ ನೆಕ್ಕಿಲಾಡಿ ಗ್ರಾಮ ಪಂಚಾಯತ್ ಕಚೇರಿಗೆ ಮುತ್ತಿಗೆ ಹಾಕಿ ಉಗ್ರ ಪ್ರತಿಭಟನೆ ನಡೆಸುವುದು ಅನಿವಾರ್ಯ ಎಂದು ಗ್ರಾಮಸ್ಥರು ಗಂಭೀರ ಎಚ್ಚರಿಕೆ ನೀಡಿದ್ದಾರೆ

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

ಕಂಚಿನಡ್ಕ ಪದವಿನಲ್ಲಿ ತ್ಯಾಜ್ಯ ಸಂಸ್ಕರಣಾ ಘಟಕದ ಅವ್ಯವಸ್ಥೆ: ಮಣ್ಣಿನೊಳಗೆ ಹೂತುಹಾಕುವ ಕಳ್ಳ ವ್ಯವಹಾರ ಬಯಲು!

Published

on

ಬಂಟ್ವಾಳ/ಉಳ್ಳಾಲ: ಉಳ್ಳಾಲ ವಿಧಾನಸಭಾ ಕ್ಷೇತ್ರದ ಸಜಿಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿರುವ ತ್ಯಾಜ್ಯ ವಿಲೇವಾರಿ ಹಾಗೂ ಸಂಸ್ಕರಣಾ ಘಟಕವು ನಿರ್ವಹಣೆಯಿಲ್ಲದೆ ಭಾರಿ ಅವ್ಯವಸ್ಥೆಯ ಗಂಟಾಗಿದೆ. ಬಂಟ್ವಾಳ ಪುರಸಭಾ ವ್ಯಾಪ್ತಿಯಿಂದ ತರಲಾಗುವ ತ್ಯಾಜ್ಯವನ್ನು ಹಸಿ ಹಾಗೂ ಒಣ ಕಸವಾಗಿ ಬೇರ್ಪಡಿಸಿ ಸಂಸ್ಕರಿಸಬೇಕಾದ ಸಂಸ್ಥೆ, ಯಾವುದೇ ನಿಯಮ ಪಾಲಿಸದೆ ಎಲ್ಲೆಂದರಲ್ಲಿ ಲೋಡುಗಟ್ಟಲೆ ಕಸವನ್ನು ರಾಶಿ ಹಾಕಿ ಪರಿಸರವನ್ನು ದುರ್ನಾತಮಯಗೊಳಿಸಿದೆ.

ನರಕಸದೃಶ ವಾತಾವರಣ, ಜಲಮೂಲ ಕಲಿಷಿತ: ತ್ಯಾಜ್ಯದ ರಾಶಿಯಿಂದಾಗಿ ಸುತ್ತಮುತ್ತಲಿನ ಪರಿಸರದಲ್ಲಿ ತೀವ್ರ ದುರ್ನಾತ ಬೀರುತ್ತಿದ್ದು, ಮಂಚಿ ಹಾಗೂ ಕುಕ್ಕಾಜೆ-ಸಜಿಪ ಸಂಪರ್ಕ ರಸ್ತೆಯಲ್ಲಿ ಸಂಚರಿಸುವುದೇ ನರಕಸದೃಶವಾಗಿದೆ. ಹಕ್ಕಿಗಳು, ನಾಯಿ-ನರಿಗಳು ತ್ಯಾಜ್ಯವನ್ನು ಹೆಕ್ಕಿ ತಂದು ಸ್ಥಳೀಯ ನಾಗರಿಕರ ಕುಡಿಯುವ ನೀರಿನ ಬಾವಿ ಹಾಗೂ ಟ್ಯಾಂಕ್‌ಗಳಿಗೆ ಎಸೆಯುತ್ತಿದ್ದು, ಸಾಂಕ್ರಾಮಿಕ ರೋಗ ಭೀತಿ ಎದುರಾಗಿದೆ.

https://deevatigenews.com/wp-content/uploads/2026/08/WhatsApp-Video-2026-08-19-at-16.06.21-1.mp4

ಹಿಟಾಚಿ ಮೂಲಕ ತ್ಯಾಜ್ಯ ಹೂತುಹಾಕುವ ಕಳ್ಳ ವ್ಯವಹಾರ! ಲಕ್ಷಾಂತರ ರೂಪಾಯಿ ಸರ್ಕಾರಿ ಅನುದಾನ ವೆಚ್ಚ ಮಾಡಿ ನಿರ್ಮಿಸಿದ ಈ ಘಟಕದಲ್ಲಿ ತ್ಯಾಜ್ಯ ವೈಜ್ಞಾನಿಕ ವಿಲೇವಾರಿ ಬದಲಿಗೆ, ಹಿಟಾಚಿ ಯಂತ್ರ ಬಳಸಿ ಭಾರಿ ಗಾತ್ರದ ಗುಂಡಿ ತೋಡಿ ಕಸವನ್ನು ಮಣ್ಣಿನ ಅಡಿಯಲ್ಲಿ ಹೂತುಹಾಕಲಾಗುತ್ತಿದೆ. ಸ್ಥಳೀಯರು ನೀಡಿದ ದೂರಿನನ್ವಯ ಸಾಮಾಜಿಕ ಕಾರ್ಯಕರ್ತ ಸಮದ್ ಕೈಕಂಬ ಅವರು ತಮ್ಮ ತಂಡದೊಂದಿಗೆ ಸ್ಥಳಕ್ಕೆ ಭೇಟಿ ನೀಡಿದಾಗ, ಪುರಸಭಾ ಅಧಿಕಾರಿಗಳ ಈ ಬೇಜವಾಬ್ದಾರಿ ಹಾಗೂ ವೈಫಲ್ಯ ಬಹಿರಂಗಗೊಂಡಿದೆ.

ಜಿಲ್ಲಾಧಿಕಾರಿಗಳಿಗೆ ದೂರು ಸಲ್ಲಿಕೆ: ಸರ್ಕಾರದ ಹಣ ಪೋಲು ಮಾಡಿ, ಪರಿಸರ ನಾಶಕ್ಕೆ ಕಾರಣರಾಗಿರುವ ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಸಮದ್ ಕೈಕಂಬ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳಿಗೆ ದೂರು ನೀಡಿದ್ದಾರೆ

Continue Reading

Article

ಕಲ್ಲಡ್ಕ ಜಂಕ್ಷನ್‌ನಲ್ಲಿ ತಪ್ಪದ ನರಕಯಾತನೆ: ಫ್ಲೈಓವರ್ ಬಂದರೂ ಮುಗಿಯದ ಟ್ರಾಫಿಕ್ ಕಿರಿಕಿರಿ!

Published

on

ಕಲ್ಲಡ್ಕ / ಗೋಳ್ತಮಜಲು: ದಶಕಗಳ ಬೇಡಿಕೆಯಾಗಿದ್ದ ರಾಷ್ಟ್ರೀಯ ಹೆದ್ದಾರಿ ಅಗಲೀಕರಣವಾಯಿತು, ಫ್ಲೈ ಓವರ್ ಕಾಮಗಾರಿಯೂ ಪೂರ್ಣಗೊಳ್ಳುವ ಹಂತಕ್ಕೆ ಬಂದಿದೆ. ಆದರೆ ಕಲ್ಲಡ್ಕ ಜಂಕ್ಷನ್‌ನಲ್ಲಿ ಸಾರ್ವಜನಿಕರ ನರಕಯಾತನೆ ಮಾತ್ರ ಮುಗಿಯುವ ಲಕ್ಷಣ ಕಾಣುತ್ತಿಲ್ಲ! ರಸ್ತೆ ಬದಿಯ ಅಕ್ರಮ ವ್ಯಾಪಾರ, ಬೇಕಾಬಿಟ್ಟಿ ವಾಹನ ಪಾರ್ಕಿಂಗ್ ಹಾಗೂ ಹೆದ್ದಾರಿ ಜಾಗದ ಒತ್ತುವರಿಯಿಂದಾಗಿ ಇಡೀ ಕಲ್ಲಡ್ಕ ಪೇಟೆ ದಿನೇ ದಿನೇ ಅವ್ಯವಸ್ಥೆಯ ತಾಣವಾಗುತ್ತಿದೆ.

ಸಮಸ್ಯೆಯ ತೀವ್ರತೆ: ಸಾರ್ವಜನಿಕರು ಎದುರಿಸುತ್ತಿರುವ ಮೂರು ಮುಖ್ಯ ತೊಡಕುಗಳು

1. ರಸ್ತೆಯಲ್ಲೇ ವ್ಯಾಪಾರ – ಅಸ್ತವ್ಯಸ್ತಗೊಳ್ಳುತ್ತಿರುವ ಟ್ರಾಫಿಕ್

ಕಲ್ಲಡ್ಕ ಜಂಕ್ಷನ್ ಹಾಗೂ ಪ್ರಮುಖ ರಸ್ತೆ ಬದಿಗಳಲ್ಲೇ ವಾಹನಗಳನ್ನು ನಿಲ್ಲಿಸಿ ತರಕಾರಿ, ಹಣ್ಣು-ಹಂಪಲು ಹಾಗೂ ಕೋಳಿ ಕ್ರೇಟ್‌ಗಳನ್ನು ಇಟ್ಟು ವ್ಯಾಪಾರ ನಡೆಸಲಾಗುತ್ತಿದೆ. ಇದರೊಂದಿಗೆ ಆಟೋ ರಿಕ್ಷಾಗಳು ಹಾಗೂ ಖಾಸಗಿ ವಾಹನಗಳನ್ನು ನಿಯಮಬಾಹಿರವಾಗಿ ನಿಲ್ಲಿಸುವುದರಿಂದ ಸುಗಮ ಸಂಚಾರಕ್ಕೆ ತೀವ್ರ ಅಡಚಣೆಯಾಗುತ್ತಿದೆ.

2. ಪಂಚಾಯತ್ ಮತ್ತು ಪೊಲೀಸರ ನಿರ್ಲಕ್ಷ್ಯಕ್ಕೆ ಸಾರ್ವಜನಿಕ ಆಕ್ರೋಶ

ತಮ್ಮ ವ್ಯಾಪ್ತಿಯಲ್ಲಿ ನಡೆಯುತ್ತಿರುವ ಈ ಅಕ್ರಮಗಳನ್ನು ತಡೆಯಬೇಕಾದ ಗೋಳ್ತಮಜಲು ಗ್ರಾಮ ಪಂಚಾಯತ್ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಇತ್ತ ಸಂಚಾರಿ ಪೊಲೀಸರು ಮೂಲೆಯಲ್ಲಿ ನಿಂತು ಹೆಲ್ಮೆಟ್, ಸೀಟ್ ಬೆಲ್ಟ್ ಹೆಸರಿನಲ್ಲಿ ದಂಡ ವಸೂಲಿ ಮಾಡುವುದಕ್ಕಷ್ಟೇ ಸೀಮಿತರಾಗಿದ್ದಾರೆ ವಿನಃ, ಕಲ್ಲಡ್ಕ ಜಂಕ್ಷನ್‌ನಲ್ಲಿ ಪ್ರತಿದಿನ ಸಂಭವಿಸುತ್ತಿರುವ ದಟ್ಟಣೆ ಮತ್ತು ಅಸ್ತವ್ಯಸ್ತ ಪಾರ್ಕಿಂಗ್ ನಿಯಂತ್ರಿಸಲು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂಬುದು ಸ್ಥಳೀಯರ ನೇರ ಆರೋಪ.

3. ಹೆದ್ದಾರಿ ಜಾಗ ಆಕ್ರಮಿಸಿ ಅಕ್ರಮ ಕಟ್ಟಡ ನಿರ್ಮಾಣ!

ಹೆದ್ದಾರಿ ಬದಿಯ ಸಾರ್ವಜನಿಕ ಪಾರ್ಕಿಂಗ್ ಸ್ಥಳ ಹಾಗೂ ರಸ್ತೆಯ ಭಾಗವನ್ನು ಆಕ್ರಮಿಸಿಕೊಂಡು ಕಟ್ಟಡವೊಂದರ ಮಾಲೀಕ ತಡೆಬೇಲಿ (Green Sheet) ಹಾಕಿ ಕಾಮಗಾರಿ ನಡೆಸುತ್ತಿದ್ದಾನೆ. ಸಾರ್ವಜನಿಕ ಆಸ್ತಿಯನ್ನು ನುಂಗಿ ನಡೆಸುತ್ತಿರುವ ಈ ಅಕ್ರಮ ಕಾಮಗಾರಿಗೆ ಅಧಿಕಾರಿಗಳು ಕಣ್ಣು ಮುಚ್ಚಿ ಕುಳಿತಿರುವುದು ಅತ್ಯಂತ ಗಂಭೀರ ವಿಚಾರವಾಗಿದೆ.

ಕಾನೂನು ಏನು ಹೇಳುತ್ತದೆ? (ಎಚ್ಚರಿಕೆಯ ಸಂದೇಶ)

ಸಾರ್ವಜನಿಕ ರಸ್ತೆ ಮತ್ತು ಹೆದ್ದಾರಿಗಳನ್ನು ಆಕ್ರಮಿಸಿಕೊಳ್ಳುವುದು ಕಾನೂನುಬಾಹಿರ ಹಾಗೂ ಶಿಕ್ಷಾರ್ಹ ಅಪರಾಧವಾಗಿದೆ:

ಕರ್ನಾಟಕ ಪಂಚಾಯತ್ ರಾಜ್ ಕಾಯ್ದೆ ಹಾಗೂ ಸ್ಥಳೀಯ ಸೌಲಭ್ಯ ನಿಯಮಗಳು: ರಸ್ತೆ ಬದಿ ಮತ್ತು ಪಾರ್ಕಿಂಗ್ ಸ್ಥಳಗಳಲ್ಲಿ ಅಧಿಕೃತ ಪರವಾನಗಿ ಇಲ್ಲದೆ ವ್ಯಾಪಾರ ನಡೆಸುವುದು ಸಂಪೂರ್ಣ ಅಕ್ರಮ.

ಭಾರತೀಯ ಮೋಟಾರು ವಾಹನ ಕಾಯ್ದೆ (Motor Vehicles Act): ಸುಗಮ ಸಂಚಾರಕ್ಕೆ ಅಡ್ಡಿಯಾಗುವಂತೆ ರಸ್ತೆಯಲ್ಲೇ ವಾಹನಗಳನ್ನು ನಿಲ್ಲಿಸಿ ವ್ಯಾಪಾರ ಮಾಡುವುದು ಅಥವಾ ಬೇಕಾಬಿಟ್ಟಿ ಪಾರ್ಕಿಂಗ್ ಮಾಡುವುದಕ್ಕೆ ಭಾರೀ ದಂಡ ಹಾಗೂ ವಾಹನ ಮುಟ್ಟುಗೋಲು ಹಾಕಿಕೊಳ್ಳಲು ಅವಕಾಶವಿದೆ.

ರಾಷ್ಟ್ರೀಯ ಹೆದ್ದಾರಿ ಕಾಯ್ದೆ (National Highways Act, 1956): ಹೆದ್ದಾರಿ ಜಾಗವನ್ನು ಒತ್ತುವರಿ ಮಾಡಿಕೊಂಡು ಕಟ್ಟಡ ಅಥವಾ ತಡೆಬೇಲಿ ನಿರ್ಮಿಸುವುದು ಗುರುತರ ಅಪರಾಧ. ಇಂತಹ ಅಕ್ರಮ ನಿರ್ಮಾಣಗಳನ್ನು ಯಾವುದೇ ಮುನ್ಸೂಚನೆ ಇಲ್ಲದೆ ತೆರವುಗೊಳಿಸಲು ಅಧಿಕಾರಿಗಳಿಗೆ ಪೂರ್ಣ ಅಧಿಕಾರವಿದೆ.

ಸಾರ್ವಜನಿಕರ ಆಗ್ರಹ ಹಾಗೂ ಜಿಲ್ಲಾ ಎಸ್ಪಿಯವರಿಗೆ ಮನವಿ

“ಸಾಮಾನ್ಯ ಜನರ ದಿನನಿತ್ಯದ ನರಳಾಟವನ್ನು ತಪ್ಪಿಸಲು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ಹಾಗೂ ಸಂಬಂಧಪಟ್ಟ ತಾಲೂಕು/ಪಂಚಾಯತ್ ಆಡಳಿತ ತಕ್ಷಣವೇ ಮಧ್ಯಪ್ರವೇಶಿಸಬೇಕು. ಕಲ್ಲಡ್ಕ ಜಂಕ್ಷನ್‌ನಲ್ಲಿ ರಸ್ತೆ ಆಕ್ರಮಿಸಿಕೊಂಡಿರುವ ವ್ಯಾಪಾರಿಗಳು, ನಿಯಮಬಾಹಿರ ಪಾರ್ಕಿಂಗ್ ಮಾಡುವವರು ಹಾಗೂ ಹೆದ್ದಾರಿ ಜಾಗ ಒತ್ತುವರಿ ಮಾಡಿದವರ ವಿರುದ್ಧ ಯಾವುದೇ ಮುಲಾಜಿಲ್ಲದೆ ಕಟ್ಟುನಿಟ್ಟಿನ ಕಾನೂನು ಕ್ರಮ ಜರುಗಿಸಬೇಕು.”

ಪ್ರಜ್ಞಾವಂತ ನಾಗರಿಕರು, ಕಲ್ಲಡ್ಕ

Continue Reading

Kadaba

ನೂಜಿಬಾಳ್ತಿಲ: ಬಾಲೆಮಾರು-ಕುರ್ನೂಜಿಯಲ್ಲಿ ಮಳೆಗಾಲದಲ್ಲಿ ಹೊಳೆದಾಟಲು ಪರದಾಟ; ಸೇತುವೆ ನಿರ್ಮಾಣಕ್ಕೆ ಭರವಸೆ ನೀಡಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ

Published

on

ಕಡಬ: ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯಿಂದ ಇಚ್ಲಂಪಾಡಿ ಸಂಪರ್ಕಿಸುವ ರಸ್ತೆಯ ಬಾಲೆಮಾರು-ಕುರ್ನೂಜಿ ಎಂಬಲ್ಲಿ ಹರಿಯುವ ಹೊಳೆ ದಾಟಲು ಗ್ರಾಮಸ್ಥರು ಮಳೆಗಾಲದಲ್ಲಿ ತೀವ್ರ ಪರದಾಟ ನಡೆಸುತ್ತಿದ್ದಾರೆ. ಇಲ್ಲಿನ ಗ್ರಾಮಸ್ಥರ ದಶಕಗಳ ಸಂಕಷ್ಟವನ್ನು ಆಲಿಸಿದ ಕಾಂಗ್ರೆಸ್ ಮುಖಂಡ ಜಿ.ಕೃಷ್ಣಪ್ಪ ರಾಮಕುಂಜ ಅವರು ಆಃ 2ರಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸೇತುವೆ ನಿರ್ಮಾಣಕ್ಕೆ ಸರಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ತೆಪ್ಪವೇ ಆಸರೆ: ಗ್ರಾಮಸ್ಥರ ಮುಗಿಯದ ಸಂಕಷ್ಟ!

ಬೇಸಿಗೆ ಕಾಲದಲ್ಲಿ ಗ್ರಾಮಸ್ಥರೇ ಸ್ವತಃ ಪಾಲ (ಕಾಲುಸಂಕ) ರಚಿಸಿಕೊಂಡು ಹೊಳೆ ದಾಟುತ್ತಾರೆ. ಆದರೆ ಮಳೆಗಾಲದಲ್ಲಿ ಗುಂಡ್ಯ ಹೊಳೆಯು ಉಕ್ಕಿ ಹರಿದು ಪ್ರವಾಹ ಸೃಷ್ಟಿಯಾದಾಗ, ಈ ಹೊಳೆಯಲ್ಲೂ ನೀರು ಆವರಿಸಿ ಪಾಲ ಮುಳುಗಡೆಯಾಗುತ್ತದೆ. ಇದರಿಂದ ಸುತ್ತಮುತ್ತಲಿನ ಸಂಪರ್ಕ ಸಂಪೂರ್ಣ ಕಡಿತಗೊಳ್ಳುತ್ತದೆ.

ತೆಪ್ಪವೇ ಆಸರೆ: ಪಾಲ ಮುಳುಗಡೆಯಾದಾಗ ಅಪಾಯಕಾರಿ ರೀತಿಯಲ್ಲಿ ತೆಪ್ಪವನ್ನೇ ಬಳಸಿಕೊಂಡು ಗ್ರಾಮಸ್ಥರು ಹೊಳೆ ದಾಟಬೇಕಾದ ದುಸ್ಥಿತಿ ಇದೆ.

ಸಾಕಷ್ಟು ಕುಟುಂಬಗಳಿಗೆ ತೊಂದರೆ: ಈ ಭಾಗದಲ್ಲಿ 25ಕ್ಕೂ ಹೆಚ್ಚು ಮನೆಗಳಿದ್ದು, ದಿನನಿತ್ಯ ಶಾಲಾ-ಕಾಲೇಜು ಮಕ್ಕಳು ಹಾಗೂ ಗ್ರಾಮಸ್ಥರು ಪ್ರಾಣ ಕೈಯಲ್ಲಿ ಹಿಡಿದುಕೊಂಡು ಈ ಹೊಳೆ ದಾಟಿಯೇ ತಮ್ಮ ದೈನಂದಿನ ಕೆಲಸಗಳಿಗೆ ತೆರಳಬೇಕಾಗಿದೆ.

ಹಲವು ವರ್ಷಗಳ ಬೇಡಿಕೆ: ಇಲ್ಲಿ ಸೇತುವೆ ನಿರ್ಮಾಣ ಮಾಡಬೇಕೆಂದು ಗ್ರಾಮಸ್ಥರು ಹಲವು ವರ್ಷಗಳಿಂದ ಮನವಿ ಮಾಡುತ್ತಲೇ ಬಂದಿದ್ದಾರೆ. ಭರವಸೆಗಳು ಸಿಕ್ಕಿವೆಯೇ ಹೊರತು ಸೇತುವೆ ಭಾಗ್ಯ ಮಾತ್ರ ಇಂದಿಗೂ ಸಿಕ್ಕಿಲ್ಲ ಎಂಬುದು ಸ್ಥಳೀಯರ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ.

ಸ್ಥಳಕ್ಕೆ ಜಿ.ಕೃಷ್ಣಪ್ಪ ಭೇಟಿ, ಪರಿಶೀಲನೆ

ಇಲ್ಲಿನ ಪರಿಸ್ಥಿತಿಯ ಬಗ್ಗೆ ಸ್ಥಳೀಯರು ಕಾಂಗ್ರೆಸ್ ಮುಖಂಡ ಕರುಣಾಕರ ಗೌಡ ದೊಡ್ಡಉರ್ಕ ಅವರ ಗಮನಕ್ಕೆ ತಂದಿದ್ದರು. ವಿಷಯ ತಿಳಿದ ಜಿ.ಕೃಷ್ಣಪ್ಪ ರಾಮಕುಂಜ ಅವರು ಕರುಣಾಕರ ಗೌಡ ಅವರೊಂದಿಗೆ ಬಾಲೆಮಾರು-ಕುರ್ನೂಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಪಿಡಬ್ಲ್ಯುಡಿ ಇಂಜಿನಿಯರ್‌ಗೆ ಸೂಚನೆ:

ಸ್ಥಳೀಯರೊಂದಿಗೆ ಸಂಕಷ್ಟ ಆಲಿಸಿದ ಜಿ.ಕೃಷ್ಣಪ್ಪ ಅವರು, ಸೇತುವೆ ನಿರ್ಮಾಣಕ್ಕೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ತಿಳಿಸಿದರು. ಅಲ್ಲದೆ, ಸ್ಥಳದಿಂದಲೇ ಲೋಕೋಪಯೋಗಿ ಇಲಾಖೆಯ (PWD) ಇಂಜಿನಿಯರ್ ಅವರಿಗೆ ದೂರವಾಣಿ ಕರೆ ಮಾಡಿ, ತಕ್ಷಣವೇ ಸೇತುವೆ ನಿರ್ಮಾಣಕ್ಕೆ ಅಂದಾಜುಪಟ್ಟಿ (Estimate) ತಯಾರಿಸುವಂತೆ ಸೂಚನೆ ನೀಡಿದರು.

ಭೇಟಿ ವೇಳೆಯಲ್ಲಿದ್ದ ಪ್ರಮುಖರು

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಶೀನಪ್ಪ ಗೌಡ ಕುರ್ನೂಜಿ, ಶೇಖರ ಗೌಡ ಬಾಲೆಮಾರು, ಧನಂಜಯ ಗೌಡ ಬಳ್ಳೇರಿ, ಪ್ರಮೋದ್ ಗೌಡ ಬಳ್ಳೇರಿ, ಚಂದ್ರಶೇಖರ ಗೌಡ ಬಳ್ಳೇರಿ, ಚೇತನ್ ಬಳ್ಳೇರಿ, ಬಾಲಕೃಷ್ಣ ಬಳ್ಳೇರಿ, ಬಾಲಕ್ಕ ಕುರ್ನೂಜಿ, ನಳಿನಿ ಕುರ್ನೂಜಿ, ರಾಮಕ್ಕ ಬಾಲೆಮಾರು, ದೇಜಪ್ಪ ಗೌಡ ಬಾಲೆಮಾರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

Continue Reading

Trending

Copyright © 2025 Deevatige

error: Content is protected !!