Connect with us

education

ಸೈನಿಕರು ಇನ್ನು ಮುಂದೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕುವಂತಿಲ್ಲ ! ವೀಕ್ಷಣೆಗೆ ಮಾತ್ರ ಮೀಸಲು – ಭಾರತೀಯ ಸೇನೆ ಆದೇಶ

Published

on

ಯೋಧರು ಇನ್ನು ಮುಂದೆ ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್ \ ತಾಣಗಳನ್ನು. ಕೇವಲ ಮಾಹಿತಿ ಪಡೆಯಲು ಅಥವಾ ವಿಡಿಯೋ/ಪೋಸ್ಟ್ಗಳನ್ನು ನೋಡಲು ಮಾತ್ರ ಬಳಸಬಹುದಾಗಿರುತ್ತದೆ. ಯೋಧರು ಯಾವುದೇ ಪೋಸ್ಟ್ಗಳನ್ನು ಹಾಕುವಂತಿಲ್ಲ, ಯಾವುದೇ ವಿಚಾರಕ್ಕೆ ಪ್ರತಿಕ್ರಿಯೆ ನೀಡುವಂತಿಲ್ಲ ಅಥವಾ ಲೈಕ್ ಮಾಡುವಂತಿಲ್ಲ. ಕೇವಲ ಆ ಪೋಸ್ಟ್ಗಳನ್ನ ಮಾತ್ರ ವೀಕ್ಷಿಸಬಹುದು ಎಂಬುವುದಾಗಿ ಭಾರತೀಯ ಸೇನೆಯ ಇತ್ತೀಚಿನ ಆದೇಶದಲ್ಲಿ ತಿಳಿಸಲಾಗಿದೆ.


ದೇಶದ ರಕ್ಷಣೆ ಮಾಡುವ ಯೋಧರ ಶಿಸ್ತು ಮತ್ತು ಭದ್ರತೆಯ ದೃಷ್ಟಿಯಿಂದ ಭಾರತೀಯ ಸೇನೆಯು ತನ್ನ ಸಾಮಾಜಿಕ ಮಾಧ್ಯಮ ಬಳಕೆಯ ನೀತಿಯಲ್ಲಿ ಮಹತ್ವದ ತಿದ್ದುಪಡಿ ಮಾಡಿದೆ. ದಶಕಗಳಿಂದಲೂ ಯೋಧರು ಸಾರ್ವಜನಿಕವಾಗಿ ಸೋಶಿಯಲ್ ಮೀಡಿಯಾ ಬಳಸುವುದರ ಮೇಲೆ ಕಟ್ಟುನಿಟ್ಟಿನ ನಿಷೇಧವಿತ್ತು. ಈಗ ಆ ನಿಯಮದಲ್ಲಿ ಸಣ್ಣ ಸಡಿಲಿಕೆ ಮಾಡಲಾಗಿದ್ದು, ಜ್ಞಾನಾರ್ಜನೆಯ ಉದ್ದೇಶಕ್ಕಾಗಿ ಕೆಲವು ಸಾಮಾಜಿಕ ಜಾಲತಾಣಗಳನ್ನು ಬಳಸಲು ಅನುಮತಿ ನೀಡಲಾಗಿದೆ.
ಶತ್ರು ರಾಷ್ಟ್ರಗಳ ಗುಪ್ತಚರ ಸಂಸ್ಥೆಗಳು ಸುಂದರ ಯುವತಿಯರ ಹೆಸರಿನಲ್ಲಿ ಫೇಕ್ ಪ್ರೊಫೈಲ್ ಸೃಷ್ಟಿಸಿ ಯೋಧರನ್ನು ಸ್ನೇಹದ ಜಾಲಕ್ಕೆ ಬೀಳಿಸುತ್ತವೆ. ಈ ಮೂಲಕ ಸೇನೆಯ ರಹಸ್ಯ ಮಾಹಿತಿಗಳನ್ನು ಕದಿಯುವ ಅಪಾಯವಿರುತ್ತದೆ. ತಿಳಿಯದೆಯೇ ಯೋಧರು ತಮ್ಮ ಸ್ಥಳ ಅಥವಾ ಸೇನಾ ನೆಲೆಯ ಫೋಟೋಗಳನ್ನು ಹಂಚಿಕೊoಡಾಗ, ಅದು ದೇಶದ ಭದ್ರತೆಗೆ ದೊಡ್ಡ ಸಂಚಕಾರ ತರಬಲ್ಲದು ಎಂಬ ಎರಡು ಕಾರಣಗಳು ಈ ಕಠಿಣ ನಿರ್ಧಾರಕ್ಕೆ ಕಾರಣವಾಗಿದೆ.


ಫೇಸ್‌ಬುಕ್ ಸೇರಿದಂತೆ ಚೀನಾ ಮೂಲದ ಆಪ್‌ಗಳು ಮತ್ತು ಇತರ ಮೆಸೇಜಿಂಗ್ ಆಪ್‌ಗಳ ಮೇಲಿನ ಸಂಪೂರ್ಣ ನಿಷೇಧ ಹಾಗೆಯೇ ಮುಂದುವರಿಯಲಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸುವ ಯೋಧರಿಗೆ ಸ್ಮಾರ್ಟ್ಫೋನ್ ಬಳಕೆಯ ಮೇಲೂ ಮಿತಿ ಹೇರಲಾಗಿದೆ. ಈ ಹೊಸ ಬದಲಾವಣೆಯು ಕೇವಲ ಯೋಧರು ಜಾಗತಿಕ ವಿದ್ಯಮಾನಗಳನ್ನು ತಿಳಿದುಕೊಳ್ಳಲಿ ಎಂಬ ಉದ್ದೇಶವನ್ನು ಹೊಂದಿದೆ.
ತoತ್ರಜ್ಞಾನದ ಯುಗದಲ್ಲಿ ಮಾಹಿತಿ ಎಲ್ಲರಿಗೂ ಅಗತ್ಯ. ಆದರೆ ದೇಶದ ಭದ್ರತೆಯ ವಿಷಯ ಬಂದಾಗ ಶಿಸ್ತು ಅತಿ ಮುಖ್ಯ. ಭಾರತೀಯ ಸೇನೆಯ ಈ ಸಮತೋಲಿತ ನಿರ್ಧಾರವು ಯೋಧರಿಗೆ ಬಾಹ್ಯ ಪ್ರಪಂಚದ ಅರಿವು ಮೂಡಿಸುವ ಜೊತೆಗೆ ರಾಷ್ಟ್ರೀಯ ಭದ್ರತೆಯನ್ನು ಕಾಪಾಡುವಲ್ಲಿ ಯಶಸ್ವಿಯಾಗಲಿದೆ ಎಂದು ನಿರೀಕ್ಷಿಸಲಾಗಿದೆ

Continue Reading
Advertisement

education

ಅಪ್ರಾಪ್ತರಿಗೆ ಸೋಶಿಯಲ್ ಮೀಡಿಯಾ ಬಳಕೆ ನಿಷೇಧ ಆಗುತ್ತದೆಯೇ ? ಮಕ್ಕಳ ಸುರಕ್ಷತೆಗಾಗಿ ಪರಿಶೀಲಿಸಲು ಕೇಂದ್ರಕ್ಕೆ ನ್ಯಾಯಾಲಯ ಸೂಚನೆ

Published

on

ಚೆನ್ನೈ: ಇಂದಿನ ಡಿಜಿಟಲ್ ಯುಗದಲ್ಲಿ ಅಪ್ರಾಪ್ತ ವಯಸ್ಕರು ಸ್ಮಾರ್ಟ್ಫೋನ್ ಮತ್ತು ಸೋಶಿಯಲ್ ಮೀಡಿಯಾ ಬಳಕೆಯನ್ನು ಅಪರಿಮಿತವಾಗಿ ಮಾಡುತ್ತಿದ್ದಾರೆ. ಅವರನ್ನು ಸಾಮಾಜಿಕ ಜಾಲತಾಣಗಳಿಂದ ದೂರ ಮಾಡಲು ಪೋಷಕರಿಗೂ ಸಾಧ್ಯವಾಗುತ್ತಿಲ್ಲ. ಅವರಿಗೆ ಮೊಬೈಲ್ ಅನಿವಾರ್ಯ ಎಂಬoತಾಗಿದೆ. ಆದರೆ, ಇದು ಅಪ್ರಾಪ್ತ ವಯಸ್ಕರ ಮೇಲೆ ಅನೇಕ ದುಷ್ಪರಿಣಾಮಗಳನ್ನು ಬೀರುತ್ತಿದೆ, ಮತ್ತು ಅದರಿಂದ ಮಕ್ಕಳ ಭವಷ್ಯವೇ ಇಲ್ಲದಂತಾಗಿ ಅದೆಷ್ಟೋ ಕುಟುಂಬಗಳು ಆತಂಕದಲ್ಲಿದ್ದಾರೆ.
ಸೋಶಿಯಲ್ ಮೀಡಿಯಾ ಬಳಕೆಯಿಂದ ಅಪ್ರಾಪ್ತರ ಮೇಲೆ ಬೀರುತ್ತಿರುವ ದುಷ್ಪರಿಣಾಮಗಳ ಬಗ್ಗೆ ಮದ್ರಾಸ್ ಹೈಕೋರ್ಟ್ ತೀವ್ರ ಕಳವಳ ವ್ಯಕ್ತಪಡಿಸಿದ್ದು, ಆಸ್ಟ್ರೇಲಿಯಾದಲ್ಲಿ ಜಾರಿಗೆ ಬಂದಿರುವAತೆ, ಭಾರತದಲ್ಲೂ 16 ವರ್ಷದೊಳಗಿನ ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧಿಸುವ ಸಾಧ್ಯತೆಗಳನ್ನು ಪರಿಶೀಲಿಸುವಂತೆ ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ. ನ್ಯಾಯಾಲಯದ ಈ ಸಲಹೆಯು ಡಿಜಿಟಲ್ ಜಗತ್ತಿನಲ್ಲಿ ಮಕ್ಕಳ ಸುರಕ್ಷತೆಯ ಕುರಿತು ಹೊಸ ಸಂಚಲನ ಮೂಡಿಸಿರುವುದಂತೂ ಸುಳ್ಳಲ್ಲ.
ಆಸ್ಟ್ರೇಲಿಯಾ ಸರ್ಕಾರವು ಇತ್ತೀಚೆಗಷ್ಟೇ (ಡಿಸೆಂಬರ್ 10 ರಿಂದ ಜಾರಿಗೆ ಬರುವಂತೆ) ಜಗತ್ತಿನಲ್ಲೇ ಅತ್ಯಂತ ಕಠಿಣವಾದ ಕಾನೂನನ್ನು ಜಾರಿಗೆ ತಂದಿದೆ. ಇದರ ಅನ್ವಯ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಫೇಸ್‌ಬುಕ್, ಇನ್‌ಸ್ಟಾಗ್ರಾಮ್ ಮತ್ತು ಎಕ್ಸ್ (ಟ್ವಿಟರ್) ನಂತಹ ವೇದಿಕೆಗಳನ್ನು ಬಳಸುವುದನ್ನು ನಿಷೇಧಿಸಲಾಗಿದೆ. ಮಕ್ಕಳ ಮಾನಸಿಕ ಆರೋಗ್ಯ ಮತ್ತು ಸೈಬರ್ ಸುರಕ್ಷತೆಯನ್ನು ಕಾಪಾಡುವುದು ಈ ಕಾನೂನಿನ ಮುಖ್ಯ ಉದ್ದೇಶವಾಗಿದೆ.

ಹೈಕೋರ್ಟ್ ವ್ಯಕ್ತಪಡಿಸಿದ ಆತಂಕಗಳು:

ನ್ಯಾಯಮೂರ್ತಿಗಳಾದ ಜಿ. ಜಯಚಂದ್ರನ್ ಮತ್ತು ಕೆ.ಕೆ. ರಾಮಕೃಷ್ಣನ್ ಅವರಿದ್ದ ವಿಭಾಗೀಯ ಪೀಠವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ನಡೆಸುವಾಗ ಈ ಕೆಳಗಿನ ಪ್ರಮುಖ ಅಂಶಗಳನ್ನು ಪ್ರಸ್ತಾಪಿಸಿದೆ:

ಅಶ್ಲೀಲತೆಯ ಆತಂಕ: ಅಪ್ರಾಪ್ತರು ಸೋಷಿಯಲ್ ಮೀಡಿಯಾದಲ್ಲಿ ಸುಲಭವಾಗಿ ಅಶ್ಲೀಲ ಕಂಟೆAಟ್‌ಗಳನ್ನ ನೋಡುತ್ತಾರೆ ಇದರಿಂದ ಅವರ ವ್ಯಕ್ತಿತ್ವ ಮತ್ತು ಭವಿಷ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ.

ಇಂಟರ್ನೆಟ್ ಸೇವೆ ಒದಗಿಸುವ ಕಂಪನಿಗಳು ಪೋಷಕ ನಿಯಂತ್ರಣ ವ್ಯವಸ್ಥೆಯನ್ನು ಕಡ್ಡಾಯಗೊಳಿಸಬೇಕು. ಆದರೆ, ತಂತ್ರಜ್ಞಾನದಷ್ಟೇ ಪೋಷಕರ ಜವಾಬ್ದಾರಿಯೂ ಇಲ್ಲಿ ಮುಖ್ಯವಾಗಿದೆ ಎಂದು ಕೋರ್ಟ್ ಹೇಳಿದೆ.

ಕಾನೂನಿನ ಅಗತ್ಯತೆ: ಇಂದಿನ ಪರಿಸ್ಥಿತಿಯಲ್ಲಿ ಕೇವಲ ಸಲಹೆಗಳು ಸಾಲದು, ಬದಲಿಗೆ ಬಲವಾದ ಕಾನೂನಿನ ಚೌಕಟ್ಟು ಅಗತ್ಯವಿದೆ ಎಂಬ ಅಭಿಪ್ರಾಯವನ್ನು ಪೀಠ ವ್ಯಕ್ತಪಡಿಸಿದೆ.

ಭಾರತದಲ್ಲಿ ಜಾರಿಯಾಗುವ ಸಾಧ್ಯತೆ:

ಭಾರತವು ವಿಶ್ವದ ಅತಿ ದೊಡ್ಡ ಸೋಷಿಯಲ್ ಮೀಡಿಯಾ ಮಾರುಕಟ್ಟೆಗಳಲ್ಲಿ ಒಂದಾಗಿದೆ. ಇಲ್ಲಿ ಇಂತಹ ಕಾನೂನು ಜಾರಿಗೆ ತರುವುದು ತಾಂತ್ರಿಕವಾಗಿ ಸವಾಲಿನ ಕೆಲಸವಾದರೂ, ಮಕ್ಕಳ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ಗಂಭೀರ ಆಲೋಚನೆ ನಡೆಸಬೇಕಿದೆ. ವಯಸ್ಸಿನ ದೃಢೀಕರಣ ಪ್ರಕ್ರಿಯೆಯನ್ನು ಕಟ್ಟುನಿಟ್ಟುಗೊಳಿಸುವ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ. ಮಕ್ಕಳ ಸುರಕ್ಷತೆಯ ಹಿತದೃಷ್ಠಿಯಿಂದ ಆಸ್ಟ್ರೇಲಿಯಾ ಸರ್ಕಾರವು ಇತ್ತೀಚೆಗಷ್ಟೇ ಜಾರಿಗೊಳಿಸಿದ ಅತ್ಯಂತ ಕಠಿಣವಾದ ಕಾನೂನು ಭಾರತದಲ್ಲಿ ಜಾರಿಯಾಗುವ ಸಾಧ್ಯತೆ ಇದೆ,

ಮಕ್ಕಳ ಕೈಗೆ ಮೊಬೈಲ್ ನೀಡುವ ಪೋಷಕರು, ಮಕ್ಕಳು ಏನು ನೋಡುತ್ತಿದ್ದಾರೆ ಮತ್ತು ಎಷ್ಟು ಸಮಯ ಮೊಬೈಲ್‌ನಲ್ಲಿ ಕಳೆಯುತ್ತಿದ್ದಾರೆ ಎಂಬುದರ ಮೇಲೆ ನಿಗಾ ಇಡುವುದು ಕೂಡಾ ಅನಿವಾರ್ಯವಾಗಿದೆ. ನ್ಯಾಯಾಲಯದ ಈ ಸಲಹೆಯು ಡಿಜಿಟಲ್ ಜಗತ್ತಿನಲ್ಲಿ ಮಕ್ಕಳ ಸುರಕ್ಷತೆಯ ಕುರಿತು ಹೊಸ ಸಂಚಲನ ಮೂಡಿಸಿದೆ. ಕೊನೆಗೂ ಮಕ್ಕಳ ಕೈಯಿಂದ ಮೊಬೈಲ್ ಕಿತ್ತುಕೊಳ್ಳಲು ಯಾರಿಗೆ ಸಾಧ್ಯ ? ಎಂಬುವುದಕ್ಕೆ ಕಾನೂನೇ ಉತ್ತರ ನೀಡಬೇಕಾಗಿದೆ.

2025 ರಲ್ಲಿ ಜಾಗತಿಕ ಪ್ರವೃತ್ತಿಗಳಂತೆ ಆಸ್ಟ್ರೇಲಿಯಾದ ಮಾದರಿಯನ್ನು ಅನುಸರಿಸಿ, ಇತರ ಹಲವಾರು ದೇಶಗಳು ಇದೇ ರೀತಿಯ ನಿಷೇಧಗಳು ಅಥವಾ ಕಠಿಣ ವಯಸ್ಸಿನ ಮಿತಿಗಳತ್ತ ಸಾಗಿವೆ. ನಾರ್ವೆ ದೇಶವು 15 ವರ್ಷದೊಳಗಿನವರನ್ನು ದೃಢೀಕರಿಸಿದ್ದು, ಒಪ್ಪಿಗೆಯ ವಯಸ್ಸನ್ನು 13 ರಿಂದ 15 ವರ್ಷಕ್ಕೆ ಏರಿಸುವುದು ಸಂಪೂರ್ಣ ನಿಷೇಧ ಪ್ರಗತಿಯಲ್ಲಿದೆ. ಡೆನ್ಮಾರ್ಕ್ ದೇಶವು 15 ವರ್ಷದೊಳಗಿನವರನ್ನು ಪ್ರಸ್ತಾಪಿಸಿದ್ದು, 13-14 ವರ್ಷ ವಯಸ್ಸಿನವರಿಗೆ ಸೀಮಿತ ಪೋಷಕರ ಆಯ್ಕೆಗಳೊಂದಿಗೆ ನಿಷೇಧಕ್ಕಾಗಿ ಯೋಜನೆಗಳು ಪ್ರಗತಿಯಲ್ಲಿದೆ. 15 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಒಪ್ಪಿಗೆ ಅಗತ್ಯವಿದೆ; ಫ್ರಾನ್ಸ್ ದೇಶ ಪ್ರಸ್ತುತ ಸಂಪೂರ್ಣ ನಿಷೇಧದ ಬಗ್ಗೆ ಚರ್ಚಿಸುತ್ತಿದ್ದು, 15 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಒಪ್ಪಿಗೆ ಅಗತ್ಯವಿದೆ ಮಲೇಷ್ಯಾ 16 ವರ್ಷದೊಳಗಿನವರಿಗೆ ಸಾಮಾಜಿಕ ಮಾಧ್ಯಮವನ್ನು ಪ್ರವೇಶಿಸಲು (ಡಿಜಿಟಲ್ ಗುರುತು) ಪರಿಶೀಲನೆಯ ಅಗತ್ಯವಿದೆ ಎಂಬ ಯೋಜನೆ ಪ್ರಗತಿಯಲ್ಲಿದೆ. ಯುನೈಟೆಡ್ ಸ್ಟೇಟ್ಸ್ 13–16 ವರ್ಷದೊಳಗಿನವರನ್ನು ನಿಷೇಧಿಸಲು ಮತ್ತು 17 ವರ್ಷದೊಳಗಿನವರಿಗೆ ಅಲ್ಗಾರಿದಮ್‌ಗಳನ್ನು ನಿಲ್ಲಿಸಲು ಕಿಡ್ಸ್ ಆಫ್ ಸೋಶಿಯಲ್ ಮೀಡಿಯಾ ಕಾಯ್ದೆಯನ್ನು ಫೆಡರಲ್ ಮಟ್ಟದಲ್ಲಿ ಚರ್ಚಿಸಲಾಗುತ್ತಿದೆ.

Continue Reading

Bantawala

ಬಂಟ್ವಾಳ : ತೌಹೀದ್ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕೋತ್ಸವ, ಕ್ರೀಡಾಕೂಟ ಹಾಗೂ ಮಿಲಾದ್ ಪೆಸ್ಟ್

Published

on

ಬಂಟ್ವಾಳ : ಇಲ್ಲಿನ ಕೆಳಗಿನಪೇಟೆ ತೌಹೀದ್ ಆಂಗ್ಲ ಮಾಧ್ಯಮ ಶಾಲೆಯ 2025-26ನೇ ಸಾಲಿನ ಶಾಲಾ ವಾರ್ಷಿಕೋತ್ಸವ, ಕ್ರೀಡಾಕೂಟ ಹಾಗೂ ಮಿಲಾದ್ ಪೆಸ್ಟ್ ಕಾರ್ಯಕ್ರಮ ಇತ್ತೀಚೆಗೆ ಶಾಲಾ ಆವರಣದಲ್ಲಿ ನಡೆಯಿತು.

ವಾರ್ಷಿಕ ಕ್ರೀಡಾಕೂಟದ ಅಧ್ಯಕ್ಷತೆಯನ್ನು ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷ ಮಹಮ್ಮದ್ ಹನೀಫ್ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಬಂಟ್ವಾಳ ಅಗ್ನಿಶಾಮಕ ಠಾಣಾಧಿಕಾರಿ ಹರೀಶ್, ಯುನೈಟೆಡ್ ಎಂಪವರ್ಮೆಂಟ್ ಅಸೋಸಿಯೇಷನ್ ರಾಜ್ಯ ಕಾರ್ಯದರ್ಶಿ ಇಮ್ಮಿಯಾಝ್ ಗೋಳ್ತಮಜಲು ಕ್ರೀಡಾ ಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಮಿಲಾದ್ ಪೆಸ್ಟ್ ಕಾರ್ಯಕ್ರಮವು ಶಾಲಾ ಸಂಚಾಲಕ ಹಾಜಿ ಅಬ್ದುಲ್ ರಹಮಾನ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಮೌಲಾನ ಅಬ್ದುಲ್ ಸಲಾಂ ಯಾಮನಿ ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಮೌಲಾನ ಸಿರಾಜುದ್ದೀನ್ ಮದನಿ ಮಾತನಾಡಿ ಶುಭ ಹಾರೈಸಿದರು.
ಮದ್ರಸ ಮುಖ್ಯ ಶಿಕ್ಷಕ ಅಬ್ದುಲ್ ಮಜೀದ್ ಪೈಝಿ ಉಪಸ್ಥಿತರಿದ್ದರು.

ಶಾಲಾಡಳಿತ ಸಮಿತಿ ಅಧ್ಯಕ್ಷ ಅಡ್ವಕೇಟ್ ರಿಯಾಝ್ ಹುಸೈನ್‌ ರವರ ಅಧ್ಯಕ್ಷತೆಯಲ್ಲಿ ನಡೆದ ಶಾಲಾ ವಾರ್ಷಿಕೋತ್ಸವದಲ್ಲಿ  ಮಾಜಿ ಸಚಿವ ಬಿ.ರಮಾನಾಥ ರೈ,  ದಾರವಾಡ ವಿಶ್ವಾವಿದ್ಯಾಲಯದ ಉಪಕುಲಪತಿ ಎ.ಎಂ.ಖಾನ್ ಅತಿಥಿಗಳಾಗಿ ಭಾಗವಹಿಸಿದ್ದರು 

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಹಾಜಿ ಬಿ. ಎಚ್. ಖಾದರ್ ಬಂಟ್ವಾಳ, ಹಾಜಿ ಕಣಚೂರು ಮೋನು, ದುಬಾಯಿ ಉದ್ಯಮಿ ಇಬ್ರಾಹಿಂ ಗಡಿಯಾರ್, ರಿಯಾಝ್ ಫರಂಗಿಪೇಟೆ, ಶೈಕ್ಷಣಿಕ ಸಂಯೋಜಕಿ ಪ್ರತಿಮಾ,  ಸಂಪನ್ಮೂಲ ಅಧಿಕಾರಿ ಸುರೇಖ  ವೇದಿಕೆಯಲ್ಲಿ ಉಪಸ್ಥಿತರಿದ್ದರು. 

ಈ ಸಂದರ್ಭದಲ್ಲಿ ಕರ್ನಾಟಕ ಬ್ಯಾಂಕ್ ವತಿಯಿಂದ ಶಾಲೆಗೆ ಕೊಡುಗೆಯಾಗಿ ನೀಡಲಾದ ಬಸ್ಸನ್ನು ಬ್ಯಾಂಕಿನ ಅಧಿಕಾರಿ ವಿಶ್ವನಾಥ್ ಅವರು ಹಸ್ತಾಂತರಿಸಿದರು, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಜಿ ಬಿ. ಎಚ್. ಖಾದರ್ ಬಂಟ್ವಾಳ ಇವರನ್ನು ಸನ್ಮಾನಿಸಲಾಯಿತು. ಕ್ರೀಡಾ ಕ್ಷೇತ್ರದಲ್ಲಿ ಉತ್ತಮ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಹಾಗೂ 2024-25ನೇ ಸಾಲಿನ ಎಸ್.ಎಸ್.ಎಲ್.ಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. 2024-25ನೇ ಸಾಲಿನ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ತಲಾ 5000 ರೂಪಾಯಿ ದೇಣಿಗೆಯಾಗಿ ನೀಡಿದ ಇಕ್ಬಾಲ್ ಬಾವ ಅವರನ್ನು ಸ್ಮರಿಸಲಾಯಿತು.

ಶಾಲಾ ಆಡಳಿತ ಸಮಿತಿ ಕಾರ್ಯದರ್ಶಿ ಅಬ್ದುಲ್ ಖಾದರ್ ಮಾಸ್ಟರ್ ಸ್ವಾಗತಿಸಿ, ಶಾಲಾಡಳಿತ ಸಮಿತಿ ಸದಸ್ಯ, ಬಂಟ್ವಾಳ ಪುರಸಭೆಯ ನಿಕಟಪೂರ್ವ ಉಪಾಧ್ಯಕ್ಷ ಮೋನಿಸ್ ಆಲಿ ಪ್ರಸ್ತಾವನೆಗೈದರು. ಶಾಲಾ ಮುಖ್ಯ ಶಿಕ್ಷಕ ಇಬ್ರಾಹಿಂ ಸಲೀಂ ಪಿ ವಾರ್ಷಿಕ ವರದಿ ವಾಚಿಸಿದರು. .
ನಿಶ್ಮಿತಾ, ಸಲ್ಮಾ ಶಿರಿನ್ ಹಾಗೂ ಆಶಿಯಾ ಅಫ್ರಾ ವಿವಿಧ ಕಾರ್ಯಕ್ರಮ ನಿರೂಪಿಸಿದರು, ಸಹ ಮುಖ್ಯ ಶಿಕ್ಷಕಿ ರಚನಾ ವಂದಿಸಿದರು.

Continue Reading

Dakshina Kannada

ಮಾಣಿಯ ಬಾಲವಿಕಾಸ ಶಾಲೆಯಲ್ಲಿ ಅದ್ದೂರಿಯಾಗಿ ನಡೆದ ಪ್ರತಿಭಾ ಕಲೋತ್ಸವ-2025

Published

on

ವಿಟ್ಲ :ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಹಾಗೂ ಮಾಣಿ ಸ್ಥಳೀಯ ಸಂಸ್ಥೆ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ, ಮಾಣಿ ಇವರ ಸಹಭಾಗಿತ್ವದಲ್ಲಿ ಜಿಲ್ಲಾಮಟ್ಟದ ಪ್ರತಿಭಾ ಕಲೋತ್ಸವ–2025 ಡಿಸೆಂಬರ್ 23ರಂದು ಬಾಲವಿಕಾಸ ಆಡಿಟೋರಿಯಂನಲ್ಲಿ ಅದ್ಧೂರಿಯಾಗಿ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಮಾಣಿ ಸ್ಥಳೀಯ ಸಂಸ್ಥೆಯ ಅಧ್ಯಕ್ಷರೂ ಹಾಗೂ ಬಾಲವಿಕಾಸ ಟ್ರಸ್ಟ್ ಅಧ್ಯಕ್ಷರೂ ಆದ ಪ್ರಹ್ಲಾದ ಶೆಟ್ಟಿ ಜೆ. ವಹಿಸಿದ್ದರು. ಜಿಲ್ಲಾ ದೈಹಿಕ ಪರಿವೀಕ್ಷಣಾಧಿಕಾರಿ ಭುವನೇಶ್ ಅವರು ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು.


ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಬಂಟ್ವಾಳ ತಾಲೂಕಿನ ಪ್ರಭಾರ ಕ್ಷೇತ್ರ ಶಿಕ್ಷಣಾಧಿಕಾರಿ ಶ್ರೀಮತಿ ಮಾಲತಿ ಕೆ. ಪ್ರತಿಭಾ ಕಲೋತ್ಸವ ಸಮಿತಿ–2025ರ ಸಂಚಾಲಕ ಬದಿಗುಡ್ಡೆ ಜಗನ್ನಾಥ ಚೌಟ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ ಹಾಗೂ ಕರ್ನಾಟಕ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಕಿರಣ್ ಕುಮಾರ್ ಉಪಸ್ಥಿತರಿದ್ದು ಕಾರ್ಯಕ್ರಮದ ಸುವ್ಯವಸ್ಥಿತ ಆಯೋಜನೆಯ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ ಸ್ಪರ್ಧಿಗಳಿಗೆ ಶುಭ ಹಾರೈಸಿದರು.

ಈ ಕಾರ್ಯಕ್ರಮವನ್ನು ಸ್ಥಳೀಯ ಸಂಸ್ಥೆಯ ಸಹ ಕಾರ್ಯದರ್ಶಿ ಶ್ಯಾಮಲಾ ಸ್ವಾಗತಿಸಿ, ಜಿಲ್ಲಾ ತರಬೇತಿ ಆಯುಕ್ತ ಪ್ರತೀಮ್ ಕುಮಾರ್ ವಂದಿಸಿದರು. ರಾಜ್ಯ ಸಹಾಯಕ ಸಂಘಟನಾ ಆಯುಕ್ತರಾದ ಭರತ್ ರಾಜ್ ಕೆ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಕಾರ್ಯಕ್ರಮದ ನಿರೂಪಣೆಯನ್ನು ಮಾಣಿ ಸ್ಥಳೀಯ ಸಂಸ್ಥೆಯ ಉಪಾಧ್ಯಕ್ಷ ಬಾಲಕೃಷ್ಣ ಆಳ್ವ ನಡೆಸಿಕೊಟ್ಟರು.

ಈ ಸಂದರ್ಭದಲ್ಲಿ ವೇದಿಕೆಯಲ್ಲಿ ಗೈಡ್ಸ್ ವಿಭಾಗದ ಜಿಲ್ಲಾ ಆಯುಕ್ತೆ ಶ್ರೀಮತಿ ವಿಮಲ ರಂಗಯ್ಯ, ಜಿಲ್ಲಾ ತರಬೇತಿ ಆಯುಕ್ತರಾದ ಶಾಂತಾರಾಮ ಪ್ರಭು, ಜಿಲ್ಲಾ ಕೋಶಾಧಿಕಾರಿ ನವೀನ್ ಚಂದ್ರ ಅಂಬೂರಿ, ಜಿಲ್ಲಾ ಜೊತೆ ಕಾರ್ಯದರ್ಶಿ ಜಯವಂತಿ ಸೋನ್ಸ್, ಬಾಲವಿಕಾಸ ಟ್ರಸ್ಟ್ ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಸುಪ್ರಿಯಾ ದೇವರಮಜಲು, ಮಾಣಿ ಸ್ಥಳೀಯ ಸಂಸ್ಥೆಯ ಕೋಶಾಧಿಕಾರಿ ಇಬ್ರಾಹಿಂ ಹಾಗೂ ಕಾರ್ಯದರ್ಶಿ ಸದಾನಂದ ಶೆಟ್ಟಿ ಉಪಸ್ಥಿತರಿದ್ದರು.

ಜಿಲ್ಲೆಯ ವಿವಿಧ ಶಾಲಾ -ಕಾಲೇಜುಗಳಿಂದ 1200 ಕಬ್ಸ್, ಬುಲ್ ಬುಲ್ಸ್, ಸ್ಕೌಟ್ಸ್, ಗೈಡ್ಸ್, ರೋವರ್ಸ್, ರೇಂಜರ್ಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ದಿನ ನಡೆದ ಒಟ್ಟು 56 ಸ್ಪರ್ಧೆಗಳಿಗೆ ವಿವಿಧ ರಂಗಗಳಲ್ಲಿ ಪರಿಣಿತಿ ಪಡೆದ 36 ಅರ್ಹ ತೀರ್ಪುಗಾರರನ್ನು ಆಹ್ವಾನಿಸಿ ಸ್ಪರ್ಧೆಗಳನ್ನು ನಡೆಸಲಾಗಿತ್ತು. ಕಾರ್ಯಕ್ರಮದ ಕೊನೆಯಲ್ಲಿ ಅಧಿಕ ಅಂಕಗಳನ್ನು ಗಳಿಸಿದ್ದ ಶಾಲೆಗಳಿಗೆ ವಿಭಾಗವಾರು ಸಮಗ್ರ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.

ಕಲೋತ್ಸವಕ್ಕೆ ಕಳೆ ತುಂಬಿದ ಪಿ. ಜಿ . ಆರ್. ಸಿಂಧ್ಯ ಆಗಮನ
ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕದ ರಾಜ್ಯ ಆಯುಕ್ತರಾದ ಶ್ರೀ ಪಿ. ಜಿ. ಆರ್ ಸಿಂಧ್ಯರವರು ಕಾರ್ಯಕ್ರಮಕ್ಕೆ ಅನಿರೀಕ್ಷಿತವಾಗಿ ಭೇಟಿ ನೀಡಿ ಬಾಲವಿಕಾಸ ಶಾಲೆಯು ಅಳವಡಿಸಿಕೊಂಡ ತಂತ್ರಜ್ಞಾನದ ಬಗ್ಗೆ ಮುಕ್ತ ಕಂಠದಿಂದ ಶ್ಲಾಘಿಸಿದರು. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಅಳವಡಿಸಿಕೊಂಡ RFID ಗೇಟ್ , ಕಲೋತ್ಸವದ ವಿಜೇತ ವಿದ್ಯಾರ್ಥಿಗಳಿಗೆ ನೀಡಿದ ಸ್ಕೌಟ್ಸ್ – ಗೈಡ್ ಲೋಗೋ ಆಕಾರದ ಅಚ್ಚಿನ ಪದಕಗಳು, ಸ್ಪರ್ಧಾ ವಿಜೇತರ ಭಾವಚಿತ್ರ ಸಮೇತವಾಗಿ ಮುದ್ರಣಗೊಳ್ಳುತ್ತಿದ್ದ ಪ್ರಶಸ್ತಿ ಪತ್ರಗಳನ್ನು ಬಹುವಾಗಿ ಮೆಚ್ಚಿಕೊಂಡರು. ಬಾಲವಿಕಾಸ ಶಾಲೆಯನ್ನು ಸಂಪೂರ್ಣವಾಗಿ ವೀಕ್ಷಿಸಿದ ಅವರು ಬಾಲವಿಕಾಸ ಶಾಲೆಯು ಶಿಕ್ಷಣ ಕ್ಷೇತ್ರದಲ್ಲಿ ಮಾದರಿ ಸಂಸ್ಥೆಯಾಗಿ ಬೆಳೆಯುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ರು. ಈ ಸಂದರ್ಭದಲ್ಲಿ ಪಿ. ಜಿ. ಆರ್ ಸಿಂಧ್ಯರವರನ್ನು ಬಾಲವಿಕಾಸ ವಿದ್ಯಾಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು.

Continue Reading

Trending

Copyright © 2025 Deevatige