Connect with us

Dakshina Kannada

ಶಾಸಕರ ಉಪಸ್ಥಿತಿಯಲ್ಲಿ ಪೊಲೀಸರ ನಿರಾಕರಣೆ ಮಧ್ಯೆಯೇ ಕೇಪುವಿನಲ್ಲಿ ನಡೆದ ಕೋಳಿಅಂಕ

Published

on

ಕೇಪು: ಇತಿಹಾಸ ಪ್ರಸಿದ್ಧ ಕೇಪು ಕಜಂಬು ಉತ್ಸವ ದ್ವಜಾವರೋಹಣ ನಡೆದ ಬಳಿಕ ಸಂಪ್ರದಾಯದoತೆ ಜೂಜುರಹಿತವಾಗಿ ನಡೆದುಕೊಂಡು ಬಂದ ಕೋಳಿ ಅಂಕಕ್ಕೆ ಪೊಲೀಸರಿಂದ ಪರವಾನಿಗೆ ನಿರಾಕರಣೆ ಅಡ್ಡಿಗಳ ಮಧ್ಯೆಯೇ ಕ್ಷೇತ್ರದ ಶಾಸಕರಾದ ಆಶೋಕ್ ಕುಮಾರ್ ರೈ ದಿಢೀರನೆ ಸ್ಥಳಕ್ಕೆ ಆಗಮಿಸಿ ಸ್ಥಳದಲ್ಲಿಯೇ ನಿಂತು ಧಾರ್ಮಿಕ ನಂಬಿಕೆಯ ಜೂಜುರಹಿತ ಕೋಳಿ ಅಂಕವನ್ನು ನಡೆಸುವಲ್ಲಿ ಭಕ್ತಾದಿಗಳ ಇಚ್ಛೆಗೆ ಸಹಕರಿಸಿದ ವಿದ್ಯಮಾನವೊಂದು ಕೇಪು ಉಳ್ಳಾಲ್ತಿ ಕ್ಷೇತ್ರದಲ್ಲಿ ನಡೆಯಿತು.

ಇಂದು ಕೋಳಿಅಂಕ ನಡೆದೇ ನಡೆಯುತ್ತದೆ ಎಂಬುವುದನ್ನು ಮಾಹಿತಿ ಪಡೆದುಕೊಂಡ ಪೊಲೀಸರು ಸ್ಥಳಕ್ಕೆ ಆಗಮಿಸಿತ್ತಿರುವಂತೆ ಕ್ಷೇತ್ರದ ಶಾಸಕರೂ ಸ್ಥಳಕ್ಕೆ ಆಗಮಿಸಿದ್ದಾರೆ. ಧಾರ್ಮಿಕ ನಂಬಿಕೆಯ ಜೂಜುರಹಿತ ಕೋಳಿ ಅಂಕವನ್ನು ಸ್ಥಳದಲ್ಲಿಯೇ ನಿಂತು ನಡೆಸುವಲ್ಲಿ ಭಕ್ತಾದಿಗಳ ಇಚ್ಛೆಗೆ ಸಹಕರಿಸಿದ್ದಾರೆ. ಒಂದು ಕಾಲಮಿತಿಯೊಳಗಡೆ ಸಂಪ್ರಾದಾಯಿಕವಾಗಿ ಕೋಳಿಅಂಕವನ್ನು ಮುಗಿಸುವಂತೆಯೂ ವ್ಯವಸ್ಥಾಪಕರಲ್ಲಿ ಮನವಿಮಾಡಿ ಅಲ್ಲಿಯೇ ಮೊಕ್ಕಾಂ ಹೂಡಿದ್ದಾರೆ ಎಂದು ತಿಳಿದು ಬಂದಿದೆ. ಮುಂದೆ ಎನಾಗುತ್ತದೋ ಎಲ್ಲವೂ ದೈವೇಚ್ಛೆ ಎನ್ನುತ್ತಿದ್ದಾರೆ ಭಕ್ತರು.

ಕಳೆದ ಹಲವಾರು ವರ್ಷಗಳಿಂದ ಕೋಮು ಸಂಘರ್ಷಗಳಿoದ ತತ್ತರಿಸುತ್ತಿದ್ದ ಕರಾವಳಿಯನ್ನು ಹತೋಟಿಗೆ ತರಲು ಪ್ರತಿಯೊಬ್ಬರಿಗೂ ಸಾಮರಸ್ಯದ ಜೀವನ ಮತ್ತು ನ್ಯಾಯ ಸಮ್ಮತವಾದ ಬದುಕು ನೀಡಲು ಆಡಳಿತ ವ್ಯವಸ್ಥೆ ದಕ್ಷ ಪೊಲೀಸ್ ಅಧಿಕಾರಿಗಳನ್ನು ನೇಮಿಸಿದ ಬಳಿಕ ಬಹುತೇಕ ಅಕ್ರಮ ಚಟುವಟಿಕೆಗಳು ಸೇರಿದಂತೆ ಎಲ್ಲಾ ಕಾನೂನು ಬಾಹಿರ ಚಟುವಟಿಕೆಗಳಿಗೆ ಕಡಿವಾಣ ಹಾಕಿತ್ತು. ಅದರಂತೆ ಜೂಜು, ಕೋಳಿಅಂಕ ಸೇರಿದಂತೆ ತಡರಾತ್ರಿಗಳಲ್ಲಿ ನಡೆಯುವ ಮೋಜಿನ ಕಾರ್ಯಕ್ರಮಗಳಿಗೂ ಬ್ರೇಕ್ ನೀಡಲಾಗಿತ್ತು. ಆದರೆ ಕೇಪು ಉಳ್ಳಾಲ್ತಿ ಕ್ಷೇತ್ರದಲ್ಲಿ ಧಾರ್ಮಿಕ ನಂಟು ಹೊಂದಿರುವ ಜೂಜುರಹಿತವಾಗಿ ನಡೆಯುವ ಕೋಳಿ ಅಂಕಕ್ಕೆ ಕೋಳಿ ಅಂಕ ಪ್ರಿಯರು, ದೈವಾಭಿಮಾನಿಗಳು ಕೊನೆಯ ಘಳಿಗೆವರೆಗೂ ಪರವಾನಿಗೆಯ ನಿರೀಕ್ಷೆಯಲ್ಲಿದ್ದರು. ಆದರೆ ಕೋಳಿ ಅಂಕಕ್ಕೆ ಪರ್ಮಿಷನ್ ಸಿಗಲಿಲ್ಲ ಎಂದರೆ ನಾವು ಜೂಜುರಹಿತವಾಗಿ ಕೋಳಿಅಂಕವನ್ನು ಸಾಂಪ್ರದಾಯಿಕವಾಗಿ ಮಾಡಲೇಬೇಕು ಎಂಬುವುದು ಭಕ್ತರ ನಿಲುವು ಆಗಿತ್ತು.

ಮಕ್ಕಳನ್ನು ಸಾಂಕೇತಿಕವಾಗಿ ಉಳ್ಳಾಲ್ತಿ ದೇವಿಗೆ ಹರಿಕೆ ಒಪ್ಪಿಸುವ ನೂರಾರು ವರ್ಷಗಳ ಇತಿಹಾಸವಿರುವ ಈ ಜಾತ್ರಾ ಸಂಪ್ರದಾಯವೇ ಕಜಂಬು ಉತ್ಸವ. ಈ ಕ್ಷೇತ್ರದ ವಿಶಿಷ್ಟ ಸಂಪ್ರದಾಯ ಜಗತ್ತಿನ ಯಾವ ಮೂಲೆಯಲ್ಲೂ ಈವರೆಗೆ ಕಂಡು ಬಂದಿಲ್ಲ.ಆ ಬಳಿಕ ದೈವದ ನೆರಿ ಇಳಿಯುವ ಕಾರ್ಯಕ್ರಮ. ಆ ದಿನವೇ ಜನ್ಮ ತಾಳಿದ ಕೋಳಿ ಮರಿಯೊಂದನ್ನು ದೈವವು ಮೇಲಕ್ಕೆ ಹಾರಿಸುತ್ತದೆ. ಅದು ಕೆಳಗೆ ಬೀಳದೆ ಮೇಲೆಯೇ ಮಾಯವಾಗಿ ಬಿಡುತ್ತದೆ. ಅದಕ್ಕೆ ಉಳ್ಳಾಲ್ತಿ ಕಟ್ಟು ಕಟ್ಟು ನೆರಿ ಇಳಿಯುವುದು ಎನ್ನುತ್ತಾರೆ.

ಜಾತ್ರೆ ಮರುಳು ಎಂಬ ಗದ್ದಲವನ್ನು ಮರೆಮಾಚಿ ಜಾತ್ರೆಯಲ್ಲಿ ಕೊಡು-ಕೊಳ್ಳುವಿಕೆ,ಸಂತೆ ವ್ಯಾಪಾರ,ವ್ಯವಹಾರ, ಆಡಂಭರಗಳು ಜೂಜು ಕೋಳಿ ಅಂಕ ಸಂಪೂರ್ಣವಾಗಿ ನಿಷೇಧವಾಗಿದೆ. ಇದನ್ನು ಮೀರಿನಡೆದರೆ ಕ್ಷಣಮಾತ್ರದಲ್ಲಿಯೇ ಸಂಕಷ್ಟಗಳು ಎದುರಾಗಿ ದೇವಿಯ ಕಾರಣೀಕದ ದರ್ಶನವಾಗುವುದು ಇಂದಿಗೂ ಕಂಡುಬರುತ್ತದೆ. ಇಲ್ಲಿನ ಕಟ್ಟುಪಾಡುಗಳನ್ನು ಮೀರಿ ನಡೆದು ಸಂಕಷ್ಟಗಳನ್ನು ಅನುಭವಿಸಿದ ಅದೆಷ್ಟೋ ಮಂದಿ ಈಗಲೂ ಪ್ರಾಯಶ್ಚಿತ್ತವಾಗಿ ಸನ್ನಿಧಿಗೆ ಬಂದು ಪ್ರಸಾದ ಸ್ವೀಕರಿಸುತ್ತಾರೆ. ಈ ಗ್ರಾಮದಲ್ಲಿ ಧರ್ಮದ ತಳಹದಿಯಲ್ಲಿ ಕಾರ್ಯನಿರ್ವಹಿಸಿದರೆ ಮಾತ್ರ ಬಾಳುವೆ. ಯಾರಾದರೂ ತಪ್ಪು ಮಾಡಲು ಮುಂದಾದರೆ ‘ಉಳ್ಳಾಲ್ತಿ ಮಣು’್ಣ ಜಾಗೃತರಾಗಿರುವಂತೆ ಹಿರಿಯರು ಎಚ್ಚರಿಸುತ್ತಾರೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಬ್ರೇಕಿಂಗ್ ನ್ಯೂಸ್: ಕಾರ್ಕಳ – ಮೂಡುಬಿದ್ರೆ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ; ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಪ್ರಾಣಾಪಾಯದಿಂದ ಪಾರು

Published

on

ಕಾರ್ಕಳ: ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು ಜಂಕ್ಷನ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಾಜಿ ಸಚಿವ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಬಿ. ರಮಾನಾಥ ರೈ ಹಾಗೂ ಅವರ ಕಾರು ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕಾರ್ಕಳದಿಂದ ಮೂಡುಬಿದ್ರೆಯತ್ತ ವೇಗವಾಗಿ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ರಮಾನಾಥ ರೈ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರಿನ (KA 70 A 0099) ನಡುವೆ ಮುಖಾಮುಖಿ ಭೀಕರ ಡಿಕ್ಕಿ ಸಂಭವಿಸಿದೆ.

ಘಟನೆಯ ವಿವರ ಹಾಗೂ ರಕ್ಷಣಾ ಕಾರ್ಯ: ಅಪಘಾತದ ರಭಸಕ್ಕೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಗಾಜುಗಳು ಪುಡಿಯಾಗಿವೆ. ಕಾರಿನ ಒಳಗೆ ಏರ್‌ಬ್ಯಾಗ್‌ಗಳು ತೆರೆದುಕೊಂಡಿದ್ದರೂ ಸಹ, ಡಿಕ್ಕಿಯ ತೀವ್ರತೆಯಿಂದಾಗಿ ಮುಂಭಾಗದಲ್ಲಿ ಕುಳಿತಿದ್ದ ಮಾಜಿ ಸಚಿವ ರಮಾನಾಥ ರೈ ಹಾಗೂ ಕಾರು ಚಾಲಕ ಒಳಗೆ ಸಿಲುಕಿಕೊಂಡಿದ್ದರು. ಘಟನಾ ಸ್ಥಳದಲ್ಲಿದ್ದ ಸ್ಥಳೀಯರು ಮತ್ತು ಸಾರ್ವಜನಿಕರು ತಕ್ಷಣವೇ ಧಾವಿಸಿ ಬಂದು, ಅತ್ಯಂತ ಪ್ರಯಾಸಪಟ್ಟು ಅವರನ್ನ ಕಾರಿನಿಂದ ಹೊರತೆಗೆದಿದ್ದಾರೆ.

ಆಸ್ಪತ್ರೆಗೆ ದಾಖಲು: ಅಪಘಾತದಲ್ಲಿ ಗಾಯಗೊಂಡಿರುವ ರಮಾನಾಥ ರೈ ಹಾಗೂ ಕಾರು ಚಾಲಕರನ್ನು ತಕ್ಷಣವೇ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೃಷ್ಟವಶಾತ್ ಇಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಬಸ್ ಹಾಗೂ ಕಾರಿನಲ್ಲಿದ್ದ ಇತರೆ ಕೆಲವು ಪ್ರಯಾಣಿಕರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸ್ಥಳೀಯರು ಅವರನ್ನು ಆಸ್ಪತ್ರೆಗೆ ಸೇರಿಸಲು ನೆರವಾಗಿದ್ದಾರೆ.

ರಮಾನಾಥ ರೈಯವರು ಒಡಿಯೂರಿನಲ್ಲಿ ನಡೆದ ಒಡಿಯೂರು ಶ್ರೀ ವಿಕಾಸವಾಹಿನಿ ಸಂಭ್ರಮ ಹಾಗೂ ನೇರಳಕಟ್ಟೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಮಂಗಳೂರಿನ ಕಾರ್ಯಕ್ರಮದ ಮುಗಿಸಿ ಕಾರ್ಕಳದ ಮತ್ತೊಂದು ಸಮಾರಂಭಕ್ಕೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Continue Reading

CONGRESS

ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ

Published

on

ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್‌ಗೆ ಸೂಚನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್‌ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

award

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ

Published

on

ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.

ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.

ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.

Continue Reading

Trending

Copyright © 2025 Deevatige

error: Content is protected !!